Webdunia - Bharat's app for daily news and videos

Install App

ಐದಲ್ಲ, 10 ಕೆಜಿ ಅಕ್ಕಿಗೆ ಸರ್ಕಾರ ಹಣ ನೀಡಬೇಕು : ಪ್ರಹ್ಲಾದ್ ಜೋಶಿ

Webdunia
ಗುರುವಾರ, 29 ಜೂನ್ 2023 (08:29 IST)
ನವದೆಹಲಿ : ಕಾಂಗ್ರೆಸ್ ಸರ್ಕಾರ 10 ಕೆಜಿ ಅಕ್ಕಿಗೆ ಹಣವನ್ನು ನೀಡಬೇಕು ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.

5 ಕೆಜಿ ಅಕ್ಕಿಯ ಬದಲಿಗೆ ಪ್ರತಿ ಕೆಜಿಗೆ 34 ರೂಪಾಯಿಂತೆ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲು ಮುಂದಾದ ಕಾಂಗ್ರೆಸ್ ಸರ್ಕಾರದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚುನಾವಣಾ ಪ್ರಚಾರದ ಸಮಯದಲ್ಲಿ ಕಾಂಗ್ರೆಸ್ ನಾಯಕರು 10 ಕೆಜಿ ಅಕ್ಕಿ ನೀಡುವುದಾಗಿ ಆಶ್ವಾಸನೆ ನೀಡಿದ್ದರು. ಈ ಕಾರಣಕ್ಕೆ 10 ಕೆಜಿ ಅಕ್ಕಿಗೆ ಹಣವನ್ನು ನೀಡಬೇಕು ಎಂದು ಹೇಳಿದರು. 

10 ಕೆಜಿ ಬೇಕಾ ಬೇಡ್ವಾ ಕೈ ಎತ್ತಿ ಎಂದು ಸಿದ್ದರಾಮಯ್ಯ ಭಾಷಣ ಮಾಡಿದ್ದರು. ಸಿದ್ದರಾಮಯ್ಯನವರು ನಾವೇ ಅಕ್ಕಿಕೊಟ್ಟಿದ್ದು ಎಂದು ದಾರಿ ತಪ್ಪಿಸುತ್ತಿದ್ದರು. ಇವತ್ತು ಮೊದಲ ಬಾರಿಗೆ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಕೊಡುತ್ತಿದೆ ಎಂಬುದನ್ನು ಒಪ್ಪಿಕೊಂಡಂತಾಗಿದೆ. ಕನಿಷ್ಠ ಪಕ್ಷ 5 ಕೆಜಿಗೆ ಹಣ ನೀಡುತ್ತಿದ್ದಾರೆ ಎನ್ನುವುದೇ ಸಮಾಧಾನ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments