Webdunia - Bharat's app for daily news and videos

Install App

ಸ್ವಚ್ಚ ಭಾರತ: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸಿದ ಕೇಂದ್ರ ಮಂತ್ರಿ

ರಾಮಕೃಷ್ಣ ಪುರಾಣಿಕ
ಗುರುವಾರ, 15 ಫೆಬ್ರವರಿ 2018 (19:14 IST)
ಜೈಪುರ: ಪಿಂಕ್ ಸಿಟಿಯ ಗೋಡೆಯೊಂದರ ಮೇಲೆ ರಾಜಸ್ಥಾನದ ಆರೋಗ್ಯ ಸಚಿವ ಕಾಲಿಚರಣ್ ಸರಾಫ್ ಅವರು ಮೂತ್ರ ವಿಸರ್ಜನೆ ಮಾಡುತ್ತಿರುವ ಫೋಟೋ ವೈರಲ್ ಆಗುತ್ತಿದ್ದಂತೆಯೇ ರಾಜಸ್ಥಾನದಲ್ಲಿರುವ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸರ್ಕಾರವನ್ನು ಕಾಂಗ್ರೆಸ್ ಅಪಹಾಸ್ಯ ಮಾಡಿದೆ.
"ಸ್ವಚ್ ಭಾರತ್ ಮಿಷನ್ ಕುರಿತು ಸರಕಾರ ಚಿಂತನೆ ನಡೆಸುತ್ತಿದ್ದರೆ, ರಾಜಸ್ಥಾನದ ಆರೋಗ್ಯ ಸಚಿವರು ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡುತ್ತಿರುವಾಗ ಸಿಕ್ಕಿಹಾಕಿಕೊಂಡಿದ್ದಾರೆ. ಸರ್ಕಾರಕ್ಕೆ ನಾಚಿಕೆಯಾಗಬೇಕು ಮತ್ತು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು" ಎಂದು ಶರ್ಮಾ ಹೇಳಿದರು.
 
ಕಾಂಗ್ರೆಸ್‌ನ ರಾಜಸ್ಥಾನ್ ಘಟಕದ ಉಪಾಧ್ಯಕ್ಷರಾದ ಅರ್ಚನಾ ಶರ್ಮಾ ಅವರು ಈ ರೀತಿಯಾಗಿ ಹೇಳಿದರು, ಇಂತಹ ನಾಯಕರು "ಅವಮಾನಕರ" ಕಾರ್ಯಗಳನ್ನು ಮಾಡುವ ಮೂಲಕ ಜನರಿಗೆ ತಪ್ಪು ಸಂದೇಶವನ್ನು ನೀಡುತ್ತಿದ್ದಾರೆ, ತನ್ನದೇ ಕ್ಷೇತ್ರದಲ್ಲಿ ಇಂತಹ ಘಟನೆ ಸಚಿವರಿಂದ ಸಂಭವಿಸಬಾರದಿತ್ತು. ಸರಾಫ್ ಅವರು ಈ ರೀತಿ ಮಾಡಿದ್ದು ಇದು ಮೊದಲ ಬಾರಿಗೆ ಅಲ್ಲ ಎಂದು ಅವರು ವಾದಿಸಿದರು. ಧೋಲ್‌ಪುರ್ ಉಪ ಚುನಾವಣೆಯ ಸಮಯದಲ್ಲಿ ಅವರು ಒಟ್ಟಿಗೆ ಹೋಗುತ್ತಿದ್ದಾಗ, ಸರಾಫ್ ಅವರು ದಾರಿಯಲ್ಲಿ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡುತ್ತಿದ್ದರು ಎಂದು ಅವರು ಹೇಳಿದರು.
 
ಆದಾಗ್ಯೂ, ಈ ಘಟನೆ "ದೊಡ್ಡ ಸಮಸ್ಯೆಯಲ್ಲ" ಎಂದು ತಿರಸ್ಕರಿಸಿದ ಸರಾಫ್, ಘಟನೆಯ ಕುರಿತು ಮಾತನಾಡಲು ನಿರಾಕರಿಸಿದ್ದಾರೆ.
 
ಸ್ವಚ್ ಭಾರತ್ ಅಭಿಯಾನದಲ್ಲಿ ನಗರವನ್ನು ಪಟ್ಟಿಯಲ್ಲಿ ಮೇಲಿನ ಸ್ಥಾನಕ್ಕೆ ತರಲು ಜೈಪುರ ಪುರಸಭೆಯು ಕಠಿಣ ಪರಿಶ್ರಮವನ್ನು ಪಡುತ್ತಿದೆ, ಇಂತಹ ಸಮಯದಲ್ಲಿ ಈ ಫೋಟೋ ಭಾರಿ ಅಪಹಾಸ್ಯಕ್ಕೆ ಎಡೆಮಾಡಿಕೊಟ್ಟಿದೆ. ಈ ನಗರದ ರಸ್ತೆಗಳಲ್ಲಿ ಮೂತ್ರ ವಿಸರ್ಜನೆ ಮಾಡುವವರಿಗೆ ರೂ. 200 ದಂಡವನ್ನು ವಿಧಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments