Webdunia - Bharat's app for daily news and videos

Install App

ನಿಗದಿಯಂತೆ ಇಂದೇ ಬಜೆಟ್ ಮಂಡನೆ

Webdunia
ಬುಧವಾರ, 1 ಫೆಬ್ರವರಿ 2017 (10:17 IST)
ನಿಗದಿಯಂತೆ ಇಂದೇ ಬಜೆಟ್ ಮಂಡನೆ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಮಾಜಿ ಸಚಿವ, ಸಂಸದ ಇ. ಅಹ್ಮದ್ ನಿಧನದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಬಜೆಟ್ ಮಂಡನೆ ಮುಂದೂಡಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿತ್ತು. 
ಎಲ್ಲ ಪಕ್ಷಗಳ ನಾಯಕರ ಜತೆ ಮಾತನಾಡಿದ ಬಳಿಕ ಕೇಂದ್ರ ಸರ್ಕಾರ ಬಜೆಟ್ ಮುಂದೂಡದಿರಲು ನಿರ್ಧರಿಸಿತು.  11 ಗಂಟೆಗೆ ಕಲಾಪ ಆರಂಭಗೊಳ್ಳಲಿದ್ದು ಮೃತಪಟ್ಟ ಸಂಸದರಿಗೆ ಸಂತಾಪ ಸೂಚಿಸಿದ ಬಳಿಕ ವಿತ್ತ ಸಚಿವರು ಬಜೆಟ್ ಮಂಡನೆ ಮಾಡಲಿದ್ದಾರೆ. 
 
ಈಗಾಗಲೇ ಸಂಸತ್ತು ತಲುಪಿರುವ  ಸಚಿವ ಅರುಣ್ ಜೇಟ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿಗೆ ಬಜೆಟ್ ಸಾರಾಂಶವನ್ನು 
ವಿವರಿಸಿದ್ದಾರೆ.
 
ನಿನ್ನೆ ಬಜೆಟ್ ಅಧಿವೇಶನ ಆರಂಭವಾಗುವ ಸಂದರ್ಭದಲ್ಲಿ ರಾಷ್ಟ್ರಪತಿ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದಾಗ 78 ವರ್ಷದ ಕೇರಳದ ಸಚಿವ ಹೃದಯಾಘಾತದಿಂದ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಆರ್‌ಎಮ್ಎಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ನಸುಕಿನ ಜಾವ 2 ಗಂಟೆಗೆ ವಿಧಿವಶರಾಗಿದ್ದಾರೆ.
 
ಲೋಕಸಭೆ ಹಾಲಿ ಸದಸ್ಯರು ನಿಧನರಾದರೆ ಅವರ ಗೌರವಾರ್ಥ ಕಲಾಪವನ್ನು ಒಂದು ದಿನ ಮುಂದೂಡುವುದು ಸಂಪ್ರದಾಯ. ಅದರಲ್ಲೂ ಅಹ್ಮದ್ ಸಂಸತ್ತಿನಲ್ಲಿಯೇ ಕುಸಿದುಬಿದ್ದಿದ್ದು, ಹೀಗಾಗಿ ಬಜೆಟ್ ಮಂಡನೆ ಒಂದು ದಿನ ಮುಂದೂಡಲ್ಪಡುತ್ತದೆ ಎಂದು ಹೇಳಲಾಗುತ್ತಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿಬೆಟ್ಟದಿಂದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್: ಮಾವು ಬೆಳೆಗಾರರ ಕೋಪಕ್ಕೆ ಹೆದರಿದ ಸರ್ಕಾರ

ಕರ್ನಾಟಕದಲ್ಲಿ ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಬೇಕೇ, ನಿಮ್ಮ ಅಭಿಪ್ರಾಯವೇನು

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಂಧ್ರ ಮಾಜಿ ಸಚಿವ ಅರೆಸ್ಟ್: ಕಾರಣವೇನು ಗೊತ್ತಾ

ವಿಮಾನ ದುರಂತ: ಸಹೋದರನ ಶವಕ್ಕೆ ಹೆಗಲುಕೊಟ್ಟು ಬಿಕ್ಕಿಬಿಕ್ಕಿ ಅತ್ತ ವಿಶ್ವಾಸ್ ರಮೇಶ್ ವಿಡಿಯೊ ಇಲ್ಲಿದೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಂಚರಿಸುವವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments