Webdunia - Bharat's app for daily news and videos

Install App

ಹೆಲ್ಮೆಟ್ ಹಾಕಿ ಕೆಲಸ ಮಾಡುವ ಸರ್ಕಾರಿ ಅಧಿಕಾರಿಗಳು! ಕಾರಣವೇನು ಗೊತ್ತಾ?!

Webdunia
ಸೋಮವಾರ, 17 ಜುಲೈ 2017 (10:58 IST)
ಪಾಟ್ನಾ: ದ್ವಿಚಕ್ರ ವಾಹನದಲ್ಲಿ ಓಡಾಡುವಾಗ ಅಪಘಾತವಾದರೆ ತಲೆಗೆ ಏಟಾಗದಿರಲಿ ಎಂಬ ಕಾರಣಕ್ಕೆಹೆಲ್ಮೆಟ್ ಹಾಕಿಕೊಳ್ಳುವುದು ಸಾಮಾನ್ಯ. ಆದರೆ ಬಿಹಾರದ ಸರ್ಕಾರಿ ಕಚೇರಿಯೊಂದರಲ್ಲಿ ಅಧಿಕಾರಿಗಳು ಕಚೇರಿಯೊಳಗೆ ಕೆಲಸ ಮಾಡುವಾಗಲೂ ಹೆಲ್ಮೆಟ್ ಹಾಕಿಕೊಂಡು ಕೆಲಸ ಮಾಡುತ್ತಾರೆ. ಕಾರಣ ತುಂಬಾ ವಿಚಿತ್ರವಾಗಿದೆ!


ಇವರೆಲ್ಲರಿಗೂ ದ್ವಿಚಕ್ರ ವಾಹನವಿರುವುದೇನೋ ಸರಿ. ಆದರೆ ಕಚೇರಿಯೊಳಗೆ ಹೆಲ್ಮೆಟ್ ಯಾಕೆ ಎಂದು ಕೆದಕುತ್ತಾ ಹೋದರೆ ಇಂಟರೆಸ್ಟಿಂಗ್ ಉತ್ತರ ದೊರಕುತ್ತದೆ. ಅಲ್ಲದೆ ನಮ್ಮ ಭಾರತದ ಸರ್ಕಾರಿ ಕಚೇರಿಗಳ ದುರವಸ್ಥೆಯ ವಾಸ್ತವಾಂಶ ಬಿಚ್ಚಿಡುತ್ತದೆ.

ಇಲ್ಲಿ ಅಧಿಕಾರಿಗಳು ತಮ್ಮ ತಲೆಯನ್ನು ರಕ್ಷಿಸಿಕೊಳ್ಳುವುದಕ್ಕೇ ಹೆಲ್ಮೆಟ್ ಹಾಕುತ್ತಾರೆ. ಅದೂ ತಮ್ಮ ಕಚೇರಿಯ ಸೂರಿನಿಂದ ನೀರು ತೊಟ್ಟಿಕ್ಕುತ್ತಿರುತ್ತದಂತೆ. ಅಲ್ಲದೆ, ಅದು ಮುರಿದು ಬೀಳುವ ಸ್ಥಿತಿಯಲ್ಲಿದ್ದು, ಯಾವಾಗ ತಮ್ಮ ತಲೆಗೆ ಬಿದ್ದು ಗಾಯ ಮಾಡುತ್ತದೋ ಎಂಬ ಭೀತಿಯಲ್ಲಿ ಅಧಿಕಾರಿಗಳಿದ್ದಾರೆ.

ಇದೇ ಕಾರಣಕ್ಕೆ ಅಂತಹ ಏನೇ ಅನಾಹುತವಾದರೂ, ತಮ್ಮ ಪ್ರಾಣ ರಕ್ಷಣೆ ಮಾಡಿಕೊಳ್ಳಲು ಈ ಅಧಿಕಾರಿಗಳು ಹೆಲ್ಮೆಟ್ ಹಾಕಿಕೊಂಡೇ ಕೆಲಸ ಮಾಡುತ್ತಾರಂತೆ! ಈ ಸರ್ಕಾರಿ ಕಚೇರಿಯ ಕಟ್ಟಡ ತುಂಬಾ ಹಳೆಯದಾಗಿದೆ. ಯಾವಾಗ ಬೀಳುತ್ತದೋ ಎನ್ನುವಂತಿದೆ. ಹಾಗಿದ್ದರೂ ನಮ್ಮ ಕರ್ತವ್ಯ ತಪ್ಪಿಸುವಂತಿಲ್ಲವಲ್ಲ? ಅದಕ್ಕೇ ಹೆಲ್ಮೆಟ್ ಹಾಕಿಕೊಂಡು ಕೆಲಸ ಮಾಡುತ್ತೇವೆ ಎಂದಿದ್ದಾರೆ ಅಧಿಕಾರಿಯೊಬ್ಬರು! ಎಲ್ಲಿಗೆ ಬಂತು ನೋಡಿ ನಮ್ಮ ಪರಿಸ್ಥಿತಿ?

ಇದನ್ನೂ ಓದಿ.. ಮೆಗಾಸ್ಟಾರ್ ಚಿರಂಜೀವಿಗೆ ವಿಲನ್ ಆಗಲಿದ್ದಾರೆಯೇ ಉಪೇಂದ್ರ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ: ಕೆ ಸಿ ವೇಣುಗೋಪಾಲ್

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ

Karnataka Weather: ಈ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಇಂದು ಮಳೆಗೆ ಬಿಡುವು

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments