Webdunia - Bharat's app for daily news and videos

Install App

ಪಿಒಕೆ ನಿರಾಶ್ರಿತರಿಗೆ 2000 ಕೋಟಿ ರೂ. ಪ್ಯಾಕೇಜ್‌ಗೆ ಸರ್ಕಾರದ ಯೋಜನೆ

Webdunia
ಸೋಮವಾರ, 29 ಆಗಸ್ಟ್ 2016 (11:48 IST)
ಪಾಕ್ ಆಕ್ರಮಿತ ಕಾಶ್ಮೀರದಿಂದ ನಿರಾಶ್ರಿತರಾಗಿ ಭಾರತದಲ್ಲಿ ವಾಸಿಸುತ್ತಿರುವ ಜನರ ಶ್ರೇಯೋಭಿವೃದ್ಧಿಗಾಗಿ 2000 ಕೋಟಿ ರೂ. ಪ್ಯಾಕೇಜನ್ನು ಸರ್ಕಾರ ಪ್ರಸ್ತಾಪಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಪಿಒಕೆ ಮತ್ತು ಗಿಲ್ಗಿಟ್-ಬಾಲ್ಟಿಸ್ತಾನ ಪ್ರದೇಶಗಳ ಜನರ ಹಕ್ಕುಗಳ ರಕ್ಷಣೆಗೆ ಪ್ರತಿಪಾದಿಸುತ್ತಿರುವ ನಡುವೆ ಸರ್ಕಾರದ ಪ್ರಸ್ತಾಪ ಹೊರಬಿದ್ದಿದೆ.

ಗೃಹಸಚಿವಾಲಯವು ಪ್ಯಾಕೇಜ್ ವಿವರಗಳನ್ನು ಕ್ಯಾಬಿನೆಟ್ ಮುಂದೆ ಅನುಮೋದನೆಗಾಗಿ ಮಂಡಿಸುವ ನಿರೀಕ್ಷೆಯಿದೆ ಎಂದು ಸಚಿವಾಲಯದ ಹಿರಿಯ ಅಧಿಕಾರಿಗಳು ತಿಳಿಸಿದರು. ಜಮ್ಮು ಕಾಶ್ಮೀರ ಸರ್ಕಾರ ಇಂತಹ 36, 348 ಕುಟುಂಬಗಳನ್ನು ಗುರುತಿಸಿದ್ದು, ಅವರು ತಲಾ 5.5 ಲಕ್ಷ ರೂ. ಪಡೆಯಲಿದ್ದಾರೆ.
 
 ಬಹುತೇಕ ಮಂದಿ ಪಿಒಕೆಯ ನಿರಾಶ್ರಿತರು ಜಮ್ಮು, ಕಥುವಾ ಮತ್ತು ರಾಜೌರಿ ಜಿಲ್ಲೆಗಳಲ್ಲಿ ಅನೇಕ ಸಮಯದಿಂದ ತಂಗಿದ್ದಾರೆ. ಅವರಿಗೆ ಕಾಯಂ ನಿವಾಸಿಗಳ ಸ್ಥಾನಮಾನ ನೀಡಲಾಗಿಲ್ಲ. ಕೆಲವು ಕುಟುಂಬಗಳು 1947ರ ವಿಭಜನೆ ಕಾಲದಲ್ಲಿ ಸ್ಥಳಾಂತರಗೊಂಡಿದ್ದರೆ, ಉಳಿದವರು 1965 ಮತ್ತು 1971ರಲ್ಲಿ ಪಾಕ್ ಜತೆ ಯುದ್ಧಕಾಲದಲ್ಲಿ ಸ್ಥಳಾಂತರಗೊಂಡಿದ್ದರು. ನಿರಾಶ್ರಿತ ಜನರು ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ಅಧಿಕಾರವಿದ್ದರೂ ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸುವ ಅಧಿಕಾರವಿಲ್ಲ.
 
ನರೇಂದ್ರ ಮೋದಿ ಮೊದಲ ಬಾರಿಗೆ ಪಿಒಕೆ, ಗಿಲ್ಗಿಟ್-ಬಾಲ್ಟಿಸ್ತಾನ ಮತ್ತು ಬಲೂಚಿಸ್ತಾನದಲ್ಲಿ ವಾಸಿಸುವ ಜನರ ಸಂಕಷ್ಟಗಳ ಬಗ್ಗೆ ಆ. 12ರಂದು ಸರ್ವಸದಸ್ಯರ ಸಭೆಯಲ್ಲಿ ಗಮನಸೆಳೆದಿದ್ದರು. ಮೂರು ದಿನಗಳ ನಂತರ ಸ್ವಾತಂತ್ರ್ಯ ದಿನ ರಾಷ್ಟ್ರವನ್ನು ಉದ್ದೇಶಿಸಿದ ಭಾಷಣದಲ್ಲಿ ಪಾಕ್ ನಿಯಂತ್ರಣದಲ್ಲಿರುವ ಮೂರು ಪ್ರದೇಶಗಳನ್ನು ಮೋದಿ ಪುನಃ ಉಲ್ಲೇಖಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ರಾಪ್ತ ಮಗಳ ಮೇಲೆ ಮೂರು ವರ್ಷ ಲೈಂಗಿಕ ದೌರ್ಜನ್ಯ: ಪಾಪಿ ಅಪ್ಪನಿಗೆ ಜೀವಾವಧಿ ಶಿಕ್ಷೆ

ಯೋಗಿ ಸಿಎಂ ಆದ್ಮೇಲೆ ಯುಪಿಯಲ್ಲಿ 15 ಸಾವಿರ ಎನ್‌ಕೌಂಟರ್‌, 30 ಸಾವಿರ ಕ್ರಿಮಿನಲ್‌ಗಳ ಅರೆಸ್ಟ್‌

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

ಮುಂದಿನ ಸುದ್ದಿ
Show comments