Webdunia - Bharat's app for daily news and videos

Install App

ರದ್ದಾಗಲಿದೆ 5ರಿಂದ 8ನೇ ತರಗತಿ ವರೆಗಿನ ಕಡ್ಡಾಯ ಉತ್ತೀರ್ಣ ನೀತಿ

Webdunia
ಶನಿವಾರ, 22 ಜುಲೈ 2017 (12:58 IST)
ನವದೆಹಲಿ: ಇನ್ಮುಂದೆ 5ರಿಂದ 8ನೇ ತರಗತಿ ವರೆಗೆ ವಿದ್ಯಾರ್ಥಿಗಳನ್ನು ಕಡ್ಡಾಯ ಉತ್ತೀರ್ಣ ಮಾಡುವ ನೀತಿಯನ್ನು ರದ್ದುಗೊಳಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಈ ಕುರಿತು ಲೋಕಸಭೆಗೆ ಮಾಹಿತಿ ನೀಡಿದ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವ್ಡೇಕರ್ ಅವರು, ನೋ ಡಿಟೆನ್ಶನ್ ಪಾಲಿಸಿಯಿಂದ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ ಎಂದು ಹಲವು ರಾಜ್ಯಗಳು  ಆತಂಕ ವ್ಯಕ್ತಪಡಿಸಿವೆ. ಹೀಗಾಗಿ ತಿದ್ದುಪಡಿ ಮಸೂದೆ ಮಂಡಿಸಲಾಗುವುದು ಎಂಬ ಸುಳಿವು ನೀಡಿದ್ದಾರೆ.
 
ಹೀಗಾಗಿ ಇನ್ಮುಂದೆ 5 ರಿಂದ 8 ನೇ ತರಗತಿ ವರೆಗೆ ಮಕ್ಕಳು ಫೇಲ್ ಆದರೂ ಪಾಸ್ ಮಾಡುವಂತಿಲ್ಲ. 5ರಿಂದ 8ನೇ ತರಗತಿ ಮಕ್ಕಳು ಮಾರ್ಚ್ ​ನಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಇಲ್ಲಿ ಅನುತ್ತೀರ್ಣರಾದವರಿಗೆ ಮೇನಲ್ಲಿ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು. ಆಗಲೂ ಅವರು ಅನುತ್ತೀರ್ಣರಾದರೆ  ಅಂಥವರನ್ನು ಅದೇ ತರಗತಿಯಲ್ಲಿ ಮತ್ತೊಂದು ವರ್ಷ ಉಳಿಸಲಾಗುತ್ತದೆ.
 
 ಅನುತ್ತೀರ್ಣಗೊಳಿಸಿದರೆ ಮಕ್ಕಳು ಪ್ರೇರಣೆ ಕಳೆದುಕೊಳ್ಳುತ್ತಾರೆ. ಕೆಲವು ಸಂದರ್ಭದಲ್ಲಿ ಶಾಶ್ವತವಾಗಿ ಶಾಲೆಯನ್ನೇ ತೊರೆಯಬಹುದು ಎಂಬ ಕಾರಣಕ್ಕೆ  ಈ ಹಿಂದೆ ನಿರ್ಬಂಧ ರಹಿತ ನೀತಿ ಜಾರಿಗೆ ತರಲಾಗಿತ್ತು.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments