Webdunia - Bharat's app for daily news and videos

Install App

ದುಡ್ಡು ಕೊಡ್ಲಿಲ್ಲ ಎಂದು ಅಜ್ಜಿಯ ಕತ್ತು ಸೀಳಿದ ಮೊಮ್ಮಗ!

Webdunia
ಸೋಮವಾರ, 11 ಜುಲೈ 2022 (14:51 IST)
ನವದೆಹಲಿ : ಹಣ ನೀಡಲು ನಿರಾಕರಿಸಿದಕ್ಕೆ 84 ವರ್ಷದ ವೃದ್ಧೆಯನ್ನು ಆಕೆಯ ಅಪ್ರಾಪ್ತ ಮೊಮ್ಮಗ ಬರ್ಬರವಾಗಿ ಹತ್ಯೆಗೈದಿರುವ ಘಟನೆ ದೆಹಲಿಯ ಶಾಲಿಮಾರ್ ಬಾಗ್ನಲ್ಲಿ ನಡೆದಿದೆ.

ಸರ್ಜಿಕಲ್ ಬ್ಲೇಡ್ನಿಂದ ಬಾಲಕ ತನ್ನ ಅಜ್ಜಿಯ ಕತ್ತನ್ನು ಸೀಳಿ ಕೊಂದಿದ್ದಾನೆ. ಬಳಿಕ ತನ್ನ ನಾಲ್ವರು ಸ್ನೇಹಿತರನ್ನು ಕರೆಸಿ ಕೊಠಡಿಯಲ್ಲಿ ಬಿದ್ದಿದ್ದ ಶವವನ್ನು ತೋರಿಸಿದ್ದಾನೆ.

ಇದೀಗ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಬಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವೃದ್ಧೆ ಶಾಲಿಮಾರ್ ಬಾಗ್ನಲ್ಲಿ ಒಂಟಿಯಾಗಿ ವಾಸವಿದ್ದು, ಇತ್ತೀಚೆಗೆ ಮನೆ ಮಾರಾಟ ಮಾಡಿದ್ದರು. ಘಟನೆ ಸಂಬಂಧ ತನಿಖೆ ಆರಂಭಿಸಿದ ಪೊಲೀಸರು ಮನೆಯ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದಾಗ ಕೊಲೆಯ ಹಿಂದಿನ ರಾತ್ರಿ 9:30ರ ಸುಮಾರಿಗೆ ಬಾಲಕ ಬಿಳಿ ಟವೆಲ್ನಿಂದ ಮುಖವನ್ನು ಮುಚ್ಚಿಕೊಂಡು ಮನೆಗೆ ಪ್ರವೇಶಿಸುವುದನ್ನು ನೋಡಿದ್ದಾರೆ.

ನಂತರ ರಾತ್ರಿ 11:20ಕ್ಕೆ ಹೊರಗೆ ಬಂದ ಹುಡುಗ ಮತ್ತೆ ರಾತ್ರಿ 12:20ಕ್ಕೆ ಮನೆ ಒಳಗೆ ಹೋಗಿದ್ದಾನೆ. ಈ ದೃಶ್ಯಾವಳಿಗಳನ್ನು ಮನೆಯವರಿಗೆ ತೋರಿಸಿದಾಗ ಅವರು ಶಂಕಿತನ ಗುರುತು ಬಹಿರಂಗಪಡಿಸಿದ್ದಾರೆ.

ಬಳಿಕ ಶಾಲೆಗೆ ಹೋಗಿದ್ದ ಅಪ್ರಾಪ್ತ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಾನು ಕೆಲ ವ್ಯಕ್ತಿಗಳಿಗೆ ಹಣ ನೀಡಬೇಕಾಗಿತ್ತು. ಹೀಗಾಗಿ ಹಣಕ್ಕಾಗಿ ಅಜ್ಜಿಯನ್ನು ಕೊಲೆ ಮಾಡಲು ಪ್ಲಾನ್ ಮಾಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments