ಹೋಳಿ ಹಬ್ಬಕ್ಕೆ ಗಣ್ಯರಿಂದ ಶುಭಕೋರಿಕೆ

Webdunia
ಶುಕ್ರವಾರ, 18 ಮಾರ್ಚ್ 2022 (11:27 IST)
ನವದೆಹಲಿ : ಕೋವಿಡ್ ಇಳಿಮುಖವಾದ ನಂತರ ಇಡೀ ದೇಶವು ಸಂಭ್ರಮದಿಂದ ಹೋಳಿಹಬ್ಬ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ಸಿಂಗ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ರಾಹುಲ್ಗಾಂಧಿ ಸೇರಿದಂತೆ ಪ್ರಮುಖರು ಹಬ್ಬಕ್ಕೆ ಶುಭ ಕೋರಿದ್ದಾರೆ.
 
`ನಿಮ್ಮೆಲ್ಲರಿಗೂ ಪರಸ್ಪರ ಪ್ರೀತಿ ವಾತ್ಸಲ್ಯ ಹಾಗೂ ಸಹೋದರತ್ವ ಸಂಕೇತವಾಗಿರುವ ಹೋಳಿಹಬ್ಬದ ಶುಭಾಶಯಗಳು. ಈ ಬಣ್ಣದ ಹಬ್ಬದಲ್ಲಿ ಪ್ರತಿಯೊಂದು ಬಣ್ಣವೂ ನಿಮ್ಮ ಜೀವನದಲ್ಲಿ ಸಂತೋಷ, ಹರುಷ ತರಲಿ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂದೇಶ ನೀಡಿದ್ದಾರೆ. 

ರಕ್ಷಣಾ ಸಚಿವ ರಾಜನಾಥ್ ಸಿಂಗ್, `ಇದು ಸಕಾರಾತ್ಮಕತೆ, ಚೈತನ್ಯ, ಸಂತೋಷ ಹಾಗೂ ಸಾಮರಸ್ಯಕ್ಕೆ ಸಂಬಂಧಿಸಿದ ಬಣ್ಣಗಳ ಹಬ್ಬವಾಗಿದೆ. ಎಲ್ಲರಿಗೂ ಹಬ್ಬದ ಶುಭಾಶಯಗಳು’ ಎಂದಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಸಹ ಹೋಳಿ ಹಬ್ಬದ ಸಂದೇಶ ಕೋರಿದ್ದು, `ಹೃದಯಗಳನ್ನು ಬೆಸೆಯುವ ಈ ಹೋಳಿಹಬ್ಬ ಪ್ರತಿಯೊಬ್ಬರಿಗೂ ಹರುಷ ತರಲಿ.

ಕೋವಿಡ್ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಇಳಿಕೆಯಾಗುತ್ತಿರುವುದು ಹರ್ಷದಾಯಕ. ಆದಾಗ್ಯೂ ಹಲವಾರು ದೇಶಗಳಲ್ಲಿ ಮತ್ತೆ ಅಲೆ ಮುಂದುವರಿಯುತ್ತಿದ್ದು ಎಚ್ಚರಿಕೆಯಿಂದಿರುವಂತೆ ಜನರಿಗೆ ಸೂಚಿಸಲಾಗುತ್ತಿದೆ’ ಎಂದೂ ಸಲಹೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ಮುಂದಿನ ಸುದ್ದಿ
Show comments