Webdunia - Bharat's app for daily news and videos

Install App

ಇಂದು ರಾಜ್ಯಸಭೆಯಲ್ಲಿ ಜಿಎಸ್ ಟಿ ಮಸೂದೆ ಮಂಡನೆ

Webdunia
ಬುಧವಾರ, 3 ಆಗಸ್ಟ್ 2016 (10:27 IST)
ಬಹು ನಿರೀಕ್ಷಿತ  ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಸೂದೆ ರಾಜ್ಯಸಭೆಯಲ್ಲಿ  ಇಂದು  ಮಂಡನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮೂರು ದಿನ  ಕಲಾಪದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಬಿಜೆಪಿ ತನ್ನ 53 ರಾಜ್ಯಸಭಾ ಸಂಸದರಿಗೆ ವಿಪ್ ಜಾರಿ ಮಾಡಿದೆ.

ಅಧಿಕೃತ ತಿದ್ದುಪಡಿ ಕರಡು ಪ್ರತಿಯನ್ನು ಎಲ್ಲಾ ಸದಸ್ಯರಿಗೂ ನೀಡಲಾಗಿದ್ದು, ಮಧ್ಯಾಹ್ನ 2 ಗಂಟೆಗೆ ವಿತ್ತ ಸಚಿವ ಅರುಣ್ ಜೇಟ್ಲಿ ಪರಿಷ್ಕೃತ ಕರಡು ಮಸೂದೆಯನ್ನು ಮಂಡಿಸಲಿದ್ದಾರೆ.

ಇದು ಸಾಂವಿಧಾನಿಕ ತಿದ್ದುಪಡಿ ಮಸೂದೆಯಾಗಿರೋದ್ರಿಂದ ರಾಜ್ಯಸಭೆಯಲ್ಲಿ ಮೂರನೇ ಎರಡರಷ್ಟು ಬಹುಮತ ಅಗತ್ಯವಿದೆ.

ವಿಪಕ್ಷಗಳ ಬೇಡಿಕೆಯಂತೆ ಮಸೂದೆಯಲ್ಲಿ ಸರ್ಕಾರ ಕೆಲವು ತಿದ್ದುಪಡಿಗಳನ್ನು ತರುತ್ತಿದ್ದು ಕಾಂಗ್ರೆಸ್‌ ಮತ್ತು ಇತರ ಎಲ್ಲ ಪ್ರಮುಖ ವಿರೋಧ ಪಕ್ಷಗಳು ಬೆಂಬಲ ನೀಡುವ ಸುಳಿವು ನೀಡಿವೆ. ಹಾಗಾಗಿ ಈ ಬಾರಿ ರಾಜ್ಯಸಭೆಯಲ್ಲಿ ಜಿಎಸ್‌ಟಿ ಅಂಗೀಕಾರವಾಗುವುದು ಬಹುತೇಕ ಖಚಿತವೆನಿಸಿದೆ.

ರಾಜ್ಯಸಭೆಯ ಅನುಮೋದನೆ  ನಂತರ ರಾಜ್ಯಗಳ ಅಂಗೀಕಾರ ಪಡೆಯಬೇಕಿರುವ ಮಸೂದೆ ರಾಷ್ಟ್ರಪತಿಗಳ ಅಂಕಿತ ಬಿದ್ದ ನಂತರ ಕಾಯಿದೆ ಸ್ವರೂಪ ಪಡೆಯಲಿದೆ.

‘ಜಿಎಸ್‌ಟಿ ಮಸೂದೆ ಅಂಗೀಕಾರಕ್ಕಾಗಿ ಕಲಾಪ ಪಟ್ಟಿಯಲ್ಲಿ ಸೇರಿಸಲಾಗಿದೆ. ಎಲ್ಲ ಪಕ್ಷಗಳ ಬೆಂಬಲ ಕೋರುತ್ತಿದ್ದೇವೆ. ಮಸೂದೆಯ ಪಾಸ್ ಆಗುವ ಸಾಧ್ಯತೆಗಳು ದಟ್ಟವಾಗಿವೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಸೋಮವಾರ ಅನಂತಕುಮಾರ್‌ ಭರವಸೆ ವ್ಯಕ್ತ ಪಡಿಸಿದ್ದರು.

ಈ ಮಸೂದೆ ಅಂಗೀಕಾರವಾದರೆ ದೇಶದಾದ್ಯಂತ ಒಂದೇ ಪರೋಕ್ಷ ತೆರಿಗೆ ಜಾರಿಗೆ ಬರುತ್ತದೆ.

ಮುಖ್ಯವಾಗಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಜಿಎಸ್‌ಟಿ ಮಸೂದೆಗೆ ಬೆಂಬಲ ನೀಡಲು ಒಪ್ಪುತ್ತಿಲ್ಲ. ಇದರಿಂದ ನಮ್ಮ ರಾಜ್ಯದ ಆದಾಯಕ್ಕೆ ಹೊಡೆತ ಬೀಳುತ್ತಿದೆ ಎಂಬುದು ಅವರ ಅಭಿಪ್ರಾಯ.


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments