Webdunia - Bharat's app for daily news and videos

Install App

ಗುಜರಾತ್‌ನಲ್ಲಿ ಮತ್ತೆ ಮುಸ್ಲಿಮರನ್ನು ಬೆದರಿಸುವ ತಂತ್ರ: ವೈರಲ್ ಆದ ಕೋಮುವಾದ ವಿಡಿಯೋ

Webdunia
ಭಾನುವಾರ, 19 ನವೆಂಬರ್ 2017 (16:25 IST)
ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆಗಳು ಘೋಷಣೆಯಾಗುತ್ತಿದ್ದಂತೆ ಮತದಾರರನ್ನು ಓಲೈಸಿಕೊಳ್ಳುವ ಇಲ್ಲವೇ ಬೆದರಿಸುವ ತಂತ್ರಗಳು ನಡೆಯುತ್ತಿರುವುದು ವಿಷಾದಕರವಾಗಿದೆ.
 
ಇದೀಗ ಮತ ನೀಡದಿದ್ದಲ್ಲಿ ಮುಂದೆ ಕಾದಿದೆ ಅಪಾಯ. 2002ರ ದಂಗೆ ಮರುಕಳಿಸಬಹುದು ಏನ್ನುವ ರೀತಿಯಲ್ಲಿ ಮುಸ್ಲಿಮರನ್ನು ಬೆದರಿಸುವ ವಿಡಿಯೋವೊಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.  
 
ವಕೀಲರು, ಸಾಮಾಜಿಕ ಕಾರ್ಯಕರ್ತರಾಗಿರುವ ಗೋವಿಂದ ಪರ್ಮಾರ್ ಸಲ್ಲಿಸಿದ ದೂರಿನ ಮೇರೆಗೆ ಸೋಶಿಯಲ್ ಮೀಡಿಯಾದಲ್ಲಿ ಸುತ್ತುತ್ತಿರುವ ಮತ್ತು ಕೋಮುವಾದಿಯಾಗಿರುವ ವೀಡಿಯೊ ಬಗ್ಗೆ ತನಿಖೆ ನಡೆಸಲು ಚುನಾವಣಾ ಆಯೋಗ ಆದೇಶಿಸಿದೆ.
 
ಗುಜರಾತ್ ಅಸೆಂಬ್ಲಿ ಚುನಾವಣೆಗಳ ಮುಂಚೆ ಕೋಮು ದ್ವೇಷವನ್ನು ಪ್ರಚೋದಿಸುವ ಇಂತಹ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ, ಗುಜರಾತ್ ಮುಖ್ಯ ಚುನಾವಣಾಧಿಕಾರಿಗೆ ಅಪರಾಧಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.
 
1.15 ನಿಮಿಷದ ವಿಡಿಯೋ ಕ್ಲಿಪ್‌ನಲ್ಲಿ  ಮಹಿಳೆಯೊಬ್ಬಳು ನಿರ್ಜನ ಪ್ರದೇಶದಿಂದ ಅವಸರದಲ್ಲಿ ಓಡಿ ಬರುತ್ತಿರುತ್ತಾಳೆ. ನಿಮ್ಮ ಮತ ನಿಮ್ಮ ಸುರಕ್ಷೆ ಎನ್ನು ಕ್ಯಾಪ್ಶನ್‌ನೊಂದಿಗೆ ವಿಡಿಯೋ ಅಂತ್ಯವಾಗುತ್ತದೆ.
 
ಏತನ್ಮಧ್ಯೆ, ಅಹಮದಾಬಾದ್‌ಲ್ಲಿರುವ ಸೈಬರ್ ಅಪರಾಧ ಸೆಲ್, ಸಾಮಾಜಿಕ ಮಾಧ್ಯಮದ ವೀಡಿಯೊ ವಿರುದ್ಧ ಶುಕ್ರವಾರ ಸಲ್ಲಿಸಿದ ದೂರಿನ ಬಗ್ಗೆ ತನಿಖೆ ನಡೆಸಿದೆ. ಸಾಮಾಜಿಕ ಮಾಧ್ಯಮದ ವೇದಿಕೆಗಳಲ್ಲಿ ಪ್ರಸಾರವಾದ ವಿಡಿಯೋ ಕ್ಲಿಪ್ ಮತದಾನಕ್ಕೆ ಒಳಪಟ್ಟ ಗುಜರಾತ್‌ನಲ್ಲಿ "ಮತಗಳನ್ನು ಧ್ರುವೀಕರಿಸಲು" ಮುಸ್ಲಿಮರ ವಿರುದ್ಧ ದ್ವೇಷವನ್ನು ಹರಡಲು ಉದ್ದೇಶಿಸಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments