Webdunia - Bharat's app for daily news and videos

Install App

ಪಟೇಲ್ ಸಮುದಾಯದ ಹೋರಾಟಕ್ಕೆ ಗುಜರಾತ್ ಸರಕಾರವೇ ಹೊಣೆ: ತೊಗಾಡಿಯಾ

Webdunia
ಬುಧವಾರ, 2 ಸೆಪ್ಟಂಬರ್ 2015 (14:58 IST)
ಪಟೇಲ್ ಸಮುದಾಯದ ಪ್ರತಿಭಟನೆಗೆ ಗುಜರಾತ್ ಸರಕಾರದ ನೀತಿಗಳೇ ಕಾರಣವಾಗಿವೆ ಎಂದು ವಿಶ್ವ ಹಿಂದೂ ಪರಿಷದ್‌ನ ಅಂತಾರಾಷ್ಟ್ರೀಯ ಕಾರ್ಯದರ್ಶಿ ಡಾ.ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.
 
ಪಟೇಲ್ ಸಮುದಾಯಕ್ಕೆ ಸೇರಿದ ತೊಗಾಡಿಯಾ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿ, ಕೃಷಿ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡದಿರುವುದು, ಅಭಿವೃದ್ಧಿಗೆ ಮನ್ನಣೆ ನೀಡದಿರುವುದು ಹಾಗೂ ಸಾಲದ ಬಾಧೆಯಿಂದ ಕಂಗಾಲಾದ ರೈತರಿಗೆ ಸಾಂತ್ವನ ಹೇಳದಿರುವುದು ಗುಜರಾತ್ ಸರಕಾರದ ವೈಫಲ್ಯಗಳಾಗಿವೆ ಎಂದು ಹೇಳಿದ್ದಾರೆ. 
 
ವಿಶ್ವ ಹಿಂದು ಸಮಾಚಾರ ಪತ್ರಿಕೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ವಿಶೇಷ ಆವೃತ್ತಿಯನ್ನು ಬಿಡುಗಡೆಗೊಳಿಸಿದ ಅವರು, ಗುಜರಾತ್ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳು ದೇಶಕ್ಕೆ ಕಳವಳಕಾರಿಯಾಗಿದ್ದು ಆರಂಭದಲ್ಲಿಯೇ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
 
ರಾಜ್ಯದಲ್ಲಿ ಯುವಕರು ಮತ್ತು ರೈತರು ಸಂಪೂರ್ಣವಾಗಿ ಹತಾಶೆಗೊಂಡಿರುವುದೇ ಪ್ರಮುಖ ಕಾರಣವಾಗಿದೆ. ಗುಜರಾತ್ ಸರಕಾರ ಮತ್ತಷ್ಟು ಯೋಜನೆಗಳನ್ನು ಹಮ್ಮಿಕೊಳ್ಳಬೇಕಾಗಿದೆ ಎಂದು ಪ್ರವೀಣ್ ತೊಗಾಡಿಯಾ ಸಲಹೆ ನೀಡಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments