Webdunia - Bharat's app for daily news and videos

Install App

ಗುಜರಾತ್ ಅಮೂಲ್ಯವಾದದು, ಮತದಾರರನ್ನು ಖರೀದಿಸಲು ಸಾಧ್ಯವಿಲ್ಲ: ರಾಹುಲ್

Webdunia
ಸೋಮವಾರ, 23 ಅಕ್ಟೋಬರ್ 2017 (15:12 IST)
ಬಿಜೆಪಿಗೆ ಸೇರ್ಪಡೆಯಾದ ಇಬ್ಬರು ಮುಖಂಡರು ಪಕ್ಷ ಹಣ ನೀಡಿ ಇತರ ನಾಯಕರನ್ನು ಖರೀದಿಸುತ್ತಿದೆ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಗುಜರಾತ್ ಅಮೂಲ್ಯವಾಗಿದೆ. ಅಲ್ಲಿನ ಮತದಾರರನ್ನು ಖರೀದಿಸಲು ಸಾಧ್ಯವಿಲ್ಲ ಎಂದು ಬಿಜೆಪಿಗೆ ತಿರುಗೇಟು ನೀಡಿದ್ದಾರೆ. 
ಗುಜರಾತ್ ಅಮೂಲ್ಯವಾದುದು. ಗುಜರಾತ್ ಎಂದಿಗೂ ಖರೀದಿಸಲ್ಪಟ್ಟಿಲ್ಲ. ಅದನ್ನು ಎಂದಿಗೂ ಖರೀದಿಸಬಾರದು. ಎಂದಿಗೂ ಖರೀದಿಸಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
 
ಬಿಜೆಪಿಗೆ ಸೇರ್ಪಡೆಗೊಂಡು ನಂತರ ಪಟಿದಾರ್ ಅನಾಮತ್ ಅಂದೋಲನ್‌ ಸಮಿತಿಗೆ ವಾಪಸ್ ಮರಳಿದ ನರೇಂದ್ರ ಪಟೇಲ್ ಮತ್ತು ನಿಖಿಲ್ ಸಾವಾನಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಪಕ್ಷದ ನಾಯಕರು 1 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು. ಮುಂಗಡವಾಗಿ 10 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಸೋಮುವಾರದಂದು 90 ಲಕ್ಷ ರೂಪಾಯಿಗಳನ್ನು ನೀಡುವುದಾಗಿ ತಿಳಿಸಿದ್ದಾಗಿ ಹೊಸ ಬಾಂಬ್ ಸ್ಫೋಟಿಸಿದ್ದಾರೆ.
 
ಪಟಿದಾರ್ ಸಮುದಾಯದ ಇತರ ನಾಯಕರಿಗೂ ಬಿಜೆಪಿ ಹಣದ ಆಮಿಷವೊಡ್ಡುತ್ತಿದೆ. ಏತನ್ಮಧ್ಯೆ, ಕಾಂಗ್ರೆಸ್ ಪಕ್ಷವನ್ನು ಸೇರಲು ಪಟಿದಾರ್ ಮುಖಂಡ ಹಾರ್ದಿಕ್ ಪಟೇಲ್ ನಿರಾಕರಿಸಿದ್ದು, ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲು ಸಿದ್ದನಿದ್ದೇನೆ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಪರವಾಗಿ ನರೇಂದ್ರ ಪಟೇಲ್ ಇಂತಹ ನಾಟಕವಾಡುತ್ತಿದ್ದಾರೆ ಎಂದು ಗುಜರಾತ್ ಬಿಜೆಪಿ ವಕ್ತಾರ ಭರತ್ ಪಾಂಡ್ಯ ತಿರುಗೇಟು ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments