Webdunia - Bharat's app for daily news and videos

Install App

ರಾಜ್ಯಸಭಾ ಚುನಾವಣೆ: ಶಾಸಕರಿಗೆ ಭದ್ರತೆ ನೀಡುವಂತೆ ಗುಜರಾತ್ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚನೆ

Webdunia
ಭಾನುವಾರ, 30 ಜುಲೈ 2017 (10:53 IST)
ಅಹ್ಮದಾಬಾದ್:ರಾಜ್ಯಸಭಾ ಚುನಾವಣೆ ಹಿನ್ನಲೆಯಲ್ಲಿ ಗುಜರಾತ್ ನಲ್ಲಿ ರಾಜಕೀಯ ಬೆಳವಣಿಗೆಗಳು ತೀವ್ರ ಸ್ವರೂಪ ಪಡೆದುಕೊಂಡ ಹಿನ್ನಲೆಯಲ್ಲಿ ಶಾಸಕರಿಗೆ ಹಾಗೂ ಅವರ ಕುಟುಂಬಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಚುನಾವಣಾ ಆಯೋಗ ಗುಜರಾತ್ ಸರ್ಕಾರಕ್ಕೆ ಸೂಚಿಸಿದೆ.
 
ಗುಜರಾತ್ ಕಾಂಗ್ರೆಸ್ ಘಟಕಕ್ಕೆಆಪರಷೇನ್ ಕಮಲದ ಭೀತಿ ಆರಂಭವಾಗಿದ್ದು, ತನ್ನೆಲ್ಲಾ ಶಾಸಕರನ್ನು ಬೆಂಗಳೂರಿಗೆ ರವಾನೆ ಮಾಡಿದೆ. ಬೆಂಗಳೂರಿನ ರಾಮನಗರದಲ್ಲಿರುವ ಈಗಲ್ಟನ್ ರೆಸಾರ್ಟ್ ನಲ್ಲಿ ಶಾಸಕರನ್ನು ಇರಿಸಲಾಗಿದೆ.  ಈ ಮಧ್ಯೆ ತಮ್ಮ ಶಾಸಕರಿಗೆ ರಕ್ಷಣೆ ಇಲ್ಲ. ಆಮಿಷಗಳನ್ನು, ಬೆದರಿಕೆ ಒಡ್ಡಿ  ಅವರನ್ನು ಪಕ್ಷದಿಂದ ಸೆಳೆಯುವ ಪ್ರಯತ್ನ ಮಾಡಲಾಗುತ್ತಿದೆ. ಹೀಗಾಗಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗುಜರಾತ್ ಕಾಂಗ್ರೆಸ್ ಘಟಕದ ಮುಖಂಡರು ಆಯೋಗಕ್ಕೆ ಮನವಿ ಮಾಡಿದ್ದಾರೆ.
 
ಈ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಗುಜರಾತ್ ಸರ್ಕಾರಕ್ಕೆ ಶಾಸಕರಿಗೆ ಹಾಗೂ ಅವರ ಕುಟುಂಬಸ್ಥರಿಗೆ ಸೂಕ್ತ ಭದ್ರತೆ ನೀಡುವಂತೆ ಸೂಚನೆ ನೀಡಿದೆ. ಅಂತೆಯೇ ಗುಜರಾತ್ ನಲ್ಲಿ ಚುನಾವಣಾ  ಆಯೋಗದಿಂದ ವಿಚಕ್ಷಣ ದಳವನ್ನು ರಚನೆ ಮಾಡಲಾಗಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments