Webdunia - Bharat's app for daily news and videos

Install App

ಗ್ಯಾರಂಟಿ ಇಫೆಕ್ಟ್: ನೌಕರರಿಗೆ ಸಂಬಳ ಕೊಡಲು ಹಣವಿಲ್ಲ ಎಂದು ಕೈಚೆಲ್ಲಿದ ಸಿಎಂ

Krishnaveni K
ಸೋಮವಾರ, 17 ಮಾರ್ಚ್ 2025 (17:58 IST)
ಹೈದರಾಬಾದ್: ಕರ್ನಾಟಕ ಗ್ಯಾರಂಟಿಯಂತೆ ತೆಲಂಗಾಣದಲ್ಲೂ ಕಾಂಗ್ರೆಸ್ ಸರ್ಕಾರ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದೆ. ಆದರೆ ಇದರಿಂದ ಈಗ ನೌಕರರಿಗೆ ಸಂಬಳ ಕೊಡಲೂ ಹಣವಿಲ್ಲ ಎಂದು ಸಿಎಂ ರೇವಂತ್ ರೆಡ್ಡಿ ಕೈ ಚೆಲ್ಲಿ ಕೂತಿದ್ದಾರೆ.

ಕರ್ನಾಟಕದ ಬಳಿಕ ಎಲ್ಲಾ ರಾಜ್ಯಗಳ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಉಚಿತ ಗ್ಯಾರಂಟಿಗಳನ್ನು ಘೋಷಿಸಿತ್ತು. ಅದರಂತೆ ತೆಲಂಗಾಣದಲ್ಲೂ ಪಂಚ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿದೆ.

ಆದರೆ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಈಗ ಸಿಎಂ ರೇವಂತ್ ರೆಡ್ಡಿಗೆ ಅದರ ಬಿಸಿ ಅರಿವಾಗತೊಡಗಿದೆ. ಗ್ಯಾರಂಟಿ ಯೋಜನೆಗಳಿಗಾಗಿಯೇ ರಾಜ್ಯದ ಬಹುಪಾಲು ಹಣ ಪೋಲಾಗುತ್ತಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಣ ಸಾಕಾಗುತ್ತಿಲ್ಲ ಎಂದು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಹೇಳಿದ್ದರು.

ಇದೀಗ ಮತ್ತೆ ಅದೇ ಮಾತು ಪುನರುಚ್ಚರಿಸಿದ್ದಾರೆ. ಗ್ಯಾರಂಟಿ ಯೋಜನೆಗಳು ಬೊಕ್ಕಸಕ್ಕೆ ಹೊರೆಯಾಗುತ್ತಿದೆ. ಇದರಿಂದ ಸರ್ಕಾರೀ ನೌಕರರಿಗೆ ವೇತನ ಪಾವತಿಸಲೂ ಸಾಧ್ಯವಾಗುತ್ತಿಲ್ಲ. ಆರ್ ಬಿಐನಿಂದ 4,000 ಕೋಟಿ ರೂ. ಸಾಲವನ್ನು ಕೋರಲಾಗಿದೆ.  ಹಣಕಾಸಿನ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು ಸಂಬಳ ಮತ್ತು ಪಿಂಚಣಿ ಪಾವತಿಸುವ ಬಗ್ಗೆ ನಿರ್ಧರಿಸಲು ಸರ್ಕಾರೀ ನೌಕರರನ್ನು ಕೇಳಿಕೊಂಡಿದ್ದೇವೆ ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments