Webdunia - Bharat's app for daily news and videos

Install App

ಮದುವೆಗೆ ಕೆಲವೇ ಗಂಟೆಗಳ ಮೊದಲು ತಂದೆಯಿಂದಲೇ ಹತ್ಯೆಯಾದ ಜಿಮ್ ಟ್ರೈನರ್

Krishnaveni K
ಶುಕ್ರವಾರ, 8 ಮಾರ್ಚ್ 2024 (09:57 IST)
ನವದೆಹಲಿ: ಇನ್ನೇನು ಮದುವೆಗೆ ಕೆಲವೇ ಕ್ಷಣಗಳು ಬಾಕಿಯಿದೆ ಎನ್ನುವಾಗ ವೃತ್ತಿಯಲ್ಲಿ ಜಿಮ್ ಟ್ರೈನರ್ ಆಗಿದ್ದ ಮಗನನ್ನು ತಂದೆಯೇ ಹತ್ಯೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ.

ಮದುವೆಯ ದಿಬ್ಬಣ ಹೊರಡಲು ಸಿದ್ಧತೆಯಲ್ಲಿದ್ದ ಮಗನನ್ನು ತಂದೆಯೇ ಹಲವು ಬಾರಿ ಇರಿದಿದ್ದರಿಂದ ತೀವ್ರ ಗಾಯಗೊಂಡ ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. 29 ವರ್ಷದ ಗೌರವ್ ಸಿಂಘಾಲ್ ಮೃತಪಟ್ಟ ವ್ಯಕ್ತಿ. ಕೃತ್ಯವೆಸಗಿದ ಬಳಿಕ ತಂದೆಯೇ ಮಗನ ಮೃತದೇಹವನ್ನು ಎಳೆದುಕೊಂಡು ಕೊಠಡಿಯೊಂದರಲ್ಲಿ ಹಾಕಿದ್ದ. ಆ ಮೂಲಕ ತನ್ನ ಕೃತ್ಯ ತಕ್ಷಣವೇ ಯಾರಿಗೂ ತಿಳಿಯದಂತೆ ನೋಡಿಕೊಳ್ಳಲು ಪ್ರಯತ್ನಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.

ತಂದೆ ಮತ್ತು ಮಗನ ನಡುವೆ ಉತ್ತಮ ಬಾಂಧವ್ಯವಿರಲಿಲ್ಲ. ಮಗನ ಮೇಲಿನ ವೈಮನಸ್ಯದಿಂದಾಗಿ ಈ ಕೃತ್ಯವೆಸಗಸಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಆ ಸಂದರ್ಭದಲ್ಲಿ ಕೊಲೆ ಮಾಡುವಂತಹ ಕಾರಣ ಏನಾಗಿತ್ತು ಎಂದು ಇನ್ನೂ ತನಿಖೆಯಿಂದ ಗೊತ್ತಾಗಬೇಕಿದೆ.

ಆದರೆ ಕೃತ್ಯದ ಬಗ್ಗೆ ತಪ್ಪೊಪ್ಪಿಕೊಂಡಿರುವ ತಂದೆ ತನಗೆ ಮಗನನ್ನು ಕೊಂದಿದ್ದಕ್ಕೆ ಯಾವುದೇ ಪಶ್ಚಾತ್ತಾಪವಿಲ್ಲ ಎಂದು ಹೇಳಿಕೊಂಡಿದ್ದಾನೆ. ಇದೀಗ ಆರೋಪಿ ಜೊತೆಗೆ ಆತನ ಕುಟುಂಬಸ್ಥರನ್ನೂ ಪೊಲೀಸರು ಕರೆಸಿ ವಿಚಾರಣೆ ನಡೆಸುತ್ತಿದ್ದಾರೆ. ಮೃತ ಗೌರವ್ ಮದುವೆ ಗುರುವಾರ ನಿಗದಿಯಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

ಮುಂದಿನ ಸುದ್ದಿ
Show comments