Webdunia - Bharat's app for daily news and videos

Install App

ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಬಂದರೆ ದೇಶವ್ಯಾಪಿ ಪ್ರತಿಭಟನೆ: ಹಫೀಜ್ ಸಯೀದ್

Webdunia
ಮಂಗಳವಾರ, 2 ಆಗಸ್ಟ್ 2016 (15:57 IST)
ಸಾರ್ಕ್ ರಾಷ್ಟ್ರಗಳ ಗೃಹ ಸಚಿವರ ಸಮ್ಮೇಳನದಲ್ಲಿ  ಗೃಹ ಸಚಿವ ರಾಜನಾಥ್ ಸಿಂಗ್‌ ಅವರು ಪಾಲ್ಗೊಂಡರೆ ರಾಷ್ಟ್ಪವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಜಮಾತ್ ಉದ್–ದವಾ (ಜೆಯುಡಿ) ಸಂಘಟನೆ ಮುಖ್ಯಸ್ಥ , ಮುಂಬೈ ದಾಳಿಯ ಸಂಚುಕೋರ ಹಫೀಜ್‌ ಸಯೀದ್‌ ಪಾಕ್‌ ನವಾಜ್ ಶರೀಫ್ ಸರ್ಕಾರಕ್ಕೆ ಖಡಕ್ ಆಗಿ ಎಚ್ಚರಿಕೆ ನೀಡಿದ್ದು ಪಾಕಿಸ್ತಾನಕ್ಕೆ ಸಿಂಗ್ ಭೇಟಿಯನ್ನು ತಡೆ ಹಿಡಿಯಬೇಕಾಗಿ ಆಗ್ರಹಿಸಿದ್ದಾನೆ.

ಸಾರ್ಕ್ ರಾಷ್ಟ್ರಗಳ ಗೃಹ ಸಚಿವರ 7 ನೇ ಸಮ್ಮೇಳನ ಆಗಸ್ಟ್ 3 ಮತ್ತು 4 ರಂದು ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುತ್ತಿದೆ.

ಲಾಹೋರಿನಲ್ಲಿರುವ ತನ್ನ ಮುಖ್ಯ ಕಾರ್ಯಾದಲಯದಲ್ಲಿ ಮಾತನ್ನಾಡುತ್ತಿದ್ದ ಹಫೀಜ್ , ಅಮಾಯಕ ಕಾಶ್ಮೀರಿಗಳ ಸಾವಿಗೆ ಕಾರಣರಾದ ರಾಜನಾಥ್ ಅವರನ್ನು ಸಮಾವೇಶಕ್ಕೆ ಸ್ವಾಗತಿಸುವ ಮೂಲಕ ಪಾಕಿಸ್ತಾನ ಸರ್ಕಾರ ಕಾಶ್ಮೀರ ಹಿಂಸಾಚಾರದಲ್ಲಿ ಗಾಯಗೊಂಡವರಿಗೆ ಅವಮಾನ ಮಾಡುತ್ತಿದೆ.  ಸಿಂಗ್ ಅವರು ಇಸ್ಲಾಮಾಬಾದ್‌ಗೆ ಬಂದರೆ ಜೆಯುಡಿ ಕರಾಚಿ, ಪೇಶಾವರ, ಮುಲ್ತಾನ್‌, ಫೈಸಲಾಬಾದ್‌, ಮುಜಾಫರಾಬಾದ್ ಸೇರಿದಂತೆ ಇನ್ನಿತರ ನಗರಗಳಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ ಎಂದು ಎಚ್ಚರಿಕೆ ನೀಡಿದ್ದಾನೆ.

ಕಾಶ್ಮೀರಿಗಳಿಗೆ ಸಹಾಯ ಮಾಡಲು ಪಾಕಿಸ್ತಾನ ಸರ್ಕಾರಕ್ಕೆ  ಕಾಶ್ಮೀರಕ್ಕೆ ಭೇಟಿ ನೀಡಲು ಸಿಂಗ್ ಅನುಮತಿ ನೀಡಿದರೆ ಅವರಿಗೆ ಪಾಕಿಸ್ತಾನ ಪ್ರವೇಶಿಸಲು ಅವಕಾಶ ನೀಡುವ ಕುರಿತು ಶರೀಫ್ ಯೋಚಿಸಬಹುದು ಎಂದಾತ ಹೇಳಿದ್ದಾನೆ. ಅಷ್ಟೇ ಅಲ್ಲದೆ ಕಾಶ್ಮೀರಕ್ಕೆ ಸ್ವಾತಂತ್ರ್ಯ ನೀಡುವವರೆಗೆ ಭಾರತದೊಂದಿಗಿರುವ ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಬೇಕು ಎಂದಾತ ಪಾಕ್ ಸರ್ಕಾರಕ್ಕೆ, ವ್ಯಾಪಾರಿಗಳಿಗೆ ಸಲಹೆ ನೀಡಿದ್ದಾನೆ.

ಪಠಾಣಕೋಟ್ ವಾಯುನೆಲೆ ಮೇಲಿನ ದಾಳಿಯ ಬಳಿಕ  ಸಂಪುಟ ದರ್ಜೆ ಸಚಿವರೊಬ್ಬರು ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು.  ಕಾಶ್ಮೀರ ಹಿಂಸಾಚಾರ ಕುರಿತಂತೆ  ಮೂಗು ತೂರಿಸಿದ್ದ ಪಾಕಿಸ್ತಾನಕ್ಕೆ ನಮ್ಮ ಆಂತರಿಕ ವಿಷಯಗಳಲ್ಲಿ ಮಧ್ಯ ಪ್ರವೇಶಿಸದಂತೆ ಸಿಂಗ್ ತಕ್ಕ ಉತ್ತರ ನೀಡಿದ್ದರು.  ಕಾಶ್ಮೀರದಲ್ಲಿ ನಡೆದ ಹಿಂಸಾಚಾರಕ್ಕೆ ಪಾಕಿಸ್ತಾನವೇ ಕಾರಣ ಎಂದು ಆರೋಪಿಸಿದ್ದ ಸಿಂಗ್,ಶ್ರೀನಗರದಲ್ಲಿ ಉನ್ನತ ಮಟ್ಟದ ಸಭೆಯನ್ನು ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಶಸ್ತ್ರಾಸ್ತಗಳನ್ನು ಕೈಗೆತ್ತಿಕೊಳ್ಳಲು ಯುವಕರನ್ನು  ಸರಿಯಲ್ಲ ಎಂಬುದನ್ನು ನೆರೆಯ ರಾಷ್ಟ್ರ ಅರ್ಥ ಮಾಡಿಕೊಳ್ಳಬೇಕು ಎಂದು ಖಡಕ್ ಆಗಿ ಸೂಚನೆ ನೀಡಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments