Webdunia - Bharat's app for daily news and videos

Install App

ಮಲಮಗಳ ಮೇಲೆ ನಿರಂತರ ಅತ್ಯಾಚಾರವೆಸಗುತ್ತಿದ್ದ ಮಲತಂದೆ ಅರೆಸ್ಟ್

Webdunia
ಸೋಮವಾರ, 17 ಜುಲೈ 2017 (18:56 IST)
ಮಲತಂದೆಯೊಬ್ಬ ತನ್ನ ಮಲಮಗಳ ಮೇಲೆ ಮೂರು ತಿಂಗಳುಗಳಿಂದ ನಿರಂತರವಾಗಿ ಅತ್ಯಾಚಾರೆವೆಸಗಿದ ಹೇಯ ಘಟನೆ ವರದಿಯಾಗಿದೆ. ಕೊನೆಗೂ ಧೈರ್ಯ ತೋರಿದ ಬಾಲಕಿ, ಮಹಿಳಾ ಸಹಾಯವಾಣಿಗೆ ಕರೆ ಮಾಡಿದ್ದರಿಂದ  ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 
ಮಹಿಳಾ ಸಹಾಯವಾಣಿಗೆ ಬಂದ ಕರೆಯ ವಿಳಾಸ ಹುಡುಕಿಕೊಂಡ ಬಂದ ಪೊಲೀಸರು, ಪಪಿಹಾ ಟೂರಿಸ್ಟ್ ಕಾಂಪ್ಲೆಕ್ಸ್‌ನಲ್ಲಿರುವ ಲಾಡ್ಜ್‌ ಮೇಲೆ ದಾಳಿ ನಡೆಸಿದಾಗ, ಮಲತಂದೆ ತನ್ನ ಮಲಪುತ್ರಿಯೊಂದಿಗೆ ರಾಸಲೀಲೆಯಲ್ಲಿ ತೊಡಗಿರುವುದು ಕಂಡು ಬರುತ್ತದೆ. ಬಾಲಕಿಯನ್ನು ಬಚಾವ್ ಮಾಡಿ, ಆರೋಪಿಯ ವಿಚಾರಣೆ ನಡೆಸಿದಾಗ ಮಲಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಒಪ್ಪಿಕೊಂಡಿದ್ದಾನೆ.
 
ಆರೋಪಿ ಕೆಲ ವರ್ಷಗಳ ಹಿಂದೆ ಬಾಲಕಿಯ ತಾಯಿಯನ್ನು ವಿವಾಹವಾಗಿರುತ್ತಾನೆ. ಇಬ್ಬರಿಗೂ ಇದು ಎರಡನೇಯ ವಿವಾಹವಾಗಿರುತ್ತದೆ. 
 
ಆರೋಪಿ ನಗರದಲ್ಲಿ ಖಾಸಗಿ ಶಾಲೆಯೊಂದು ನಡೆಸುತ್ತಿದ್ದರೇ, ಬಾಲಕಿ ಅದೇ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಭೋಧನೆ ಮಾಡುತ್ತಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ವರದಿಗಳ ಪ್ರಕಾರ, ಆರೋಪಿ ಕಳೆದ ಮೂರು ತಿಂಗಳುಗಳಿಂದ ಮಲಮಗಳ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಬಾಲಕಿಯನ್ನು ಹೋಟೆಲ್‌ಗಳಿಗೂ ಕರೆದುಕೊಂಡು ಹೋಗಿ ಲೈಂಗಿಕ ಸುಖ ಅನುಭವಿಸಿದ್ದಾನೆ. ಮಲತಂದೆಯ ಕಾಟ ತಾಳದೆ ಬಾಲಕಿ ಕೊನೆಗೂ ಮಹಿಳಾ ಸಹಾಯವಾಣಿಗೆ ಕರೆ ಮಾಡುವಲ್ಲಿ ಯಶಸ್ವಿಯಾಗಿದ್ದಾಳೆ. 
 
ಆರೋಪಿಯನ್ನು ಬಂಧಿಸಿರುವ ಪೊಲೀಸರು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಯ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

ಮುಂದಿನ ಸುದ್ದಿ