Publish Date: Tue, 20 Dec 2022 (13:08 IST)
Updated Date: Tue, 20 Dec 2022 (15:09 IST)
ಹೈದರಾಬಾದ್ : ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಭಾರತೀಯ ರಾಷ್ಟ್ರೀಯ ಸಮಿತಿಯ ಸ್ಥಳೀಯ ಮುಖಂಡನೊಬ್ಬನನ್ನು ಹೈದರಾಬಾದ್ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ತೆಲಂಗಾಣದ ಸಿಎಂ ಕೆ. ಚಂದ್ರಶೇಖರ್ ರಾವ್ ಅವರ ಪಕ್ಷದ ನಾಯಕ, ಆರೋಪಿ ಅಖೀಲ್ ಅಹ್ಮದ್ 10 ವರ್ಷದ ಬಾಲಕಿಗೆ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿಗಳ ಪ್ರಕಾರ ಘಟನೆ ಭಾನುವಾರ ನಡೆದಿದೆ. 10 ವರ್ಷದ ಬಾಲಕಿ ಮೆಡಿಕಲ್ ಶಾಪ್ಗೆ ಹೋಗಿದ್ದಾಗ ಅಲ್ಲಿ ಅಖೀಲ್ ಅಹ್ಮದ್ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಬಳಿಕ ಬಾಲಕಿ ತನ್ನ ಮನೆಗೆ ಬಂದು ಪೋಷಕರಲ್ಲಿ ನಡೆದ ಘಟನೆ ತಿಳಿಸಿದ್ದಾಳೆ.