Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಏನೇ ಹೇಳಲಿ, ನಾನು ಮಾತ್ರ ಅಯೋಧ್ಯೆಗೆ ಹೋಗುತ್ತೇನೆ: ಹರ್ಭಜನ್ ಸಿಂಗ್

harbhajan singh

Krishnaveni K

ನವದೆಹಲಿ , ಶನಿವಾರ, 20 ಜನವರಿ 2024 (10:41 IST)
ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗುವ ಬಗ್ಗೆ ಕ್ರಿಕೆಟಿಗ, ಸಂಸದ ಹರ್ಭಜನ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ಪ್ರಮುಖ ವಿಪಕ್ಷವಾದ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಈಗಾಗಲೇ ಅಯೋಧ್ಯೆ ರಾಮಮಂದಿರ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ ಎಂದು ಸ್ಪಷ್ಟಪಡಿಸಿವೆ. ಇದು ಬಿಜೆಪಿ ರಾಜಕೀಯ ಉದ್ದೇಶಕ್ಕಾಗಿ ಮಾಡುತ್ತಿರುವ ಕಾರ್ಯಕ್ರಮ ಎಂದು ಆಕ್ರೋಶ ಹೊರಹಾಕಿವೆ.

ಇದರ ಬೆನ್ನಲ್ಲೇ ಕ್ರಿಕೆಟಿಗ, ಎಎಪಿಯಿಂದ ಸಂಸದರಾಗಿರುವ ಹರ್ಭಜನ್ ಸಿಂಗ್, ಯಾರು ಹೋಗಲಿ ಬಿಡಲಿ, ನಾನಂತೂ ಅಯೋಧ್ಯೆಯ ಕಾರ್ಯಕ್ರಮದಲ್ಲಿ ಭಾಗಿಯಾಗುವೆ ಎಂದಿದ್ದಾರೆ.

ಕಾಂಗ್ರೆಸ್ ಏನೇ ಹೇಳಲಿ, ನಾನಂತೂ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ. ಬಿಜೆಪಿ ಕಾರ್ಯಕ್ರಮ ಎಂದು ಯಾರು ಬೇಕಾದರೂ ಆಪಾದಿಸಬಹುದು. ಆದರೆ ಸದ್ಯಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿದೆ ಎಂಬುದಷ್ಟೇ ಸತ್ಯ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗುವೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಎದೆ ಸೀಳಿದರೆ ಶ್ರೀರಾಮ ಕಾಣಿಸುತ್ತಾನೆ – ಪ್ರದೀಪ್‌ ಈಶ್ವರ್‌