Webdunia - Bharat's app for daily news and videos

Install App

ಕಾಂಗ್ರೆಸ್ ಏನೇ ಹೇಳಲಿ, ನಾನು ಮಾತ್ರ ಅಯೋಧ್ಯೆಗೆ ಹೋಗುತ್ತೇನೆ: ಹರ್ಭಜನ್ ಸಿಂಗ್

Krishnaveni K
ಶನಿವಾರ, 20 ಜನವರಿ 2024 (10:41 IST)
ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗುವ ಬಗ್ಗೆ ಕ್ರಿಕೆಟಿಗ, ಸಂಸದ ಹರ್ಭಜನ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ಪ್ರಮುಖ ವಿಪಕ್ಷವಾದ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಈಗಾಗಲೇ ಅಯೋಧ್ಯೆ ರಾಮಮಂದಿರ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ ಎಂದು ಸ್ಪಷ್ಟಪಡಿಸಿವೆ. ಇದು ಬಿಜೆಪಿ ರಾಜಕೀಯ ಉದ್ದೇಶಕ್ಕಾಗಿ ಮಾಡುತ್ತಿರುವ ಕಾರ್ಯಕ್ರಮ ಎಂದು ಆಕ್ರೋಶ ಹೊರಹಾಕಿವೆ.

ಇದರ ಬೆನ್ನಲ್ಲೇ ಕ್ರಿಕೆಟಿಗ, ಎಎಪಿಯಿಂದ ಸಂಸದರಾಗಿರುವ ಹರ್ಭಜನ್ ಸಿಂಗ್, ಯಾರು ಹೋಗಲಿ ಬಿಡಲಿ, ನಾನಂತೂ ಅಯೋಧ್ಯೆಯ ಕಾರ್ಯಕ್ರಮದಲ್ಲಿ ಭಾಗಿಯಾಗುವೆ ಎಂದಿದ್ದಾರೆ.

ಕಾಂಗ್ರೆಸ್ ಏನೇ ಹೇಳಲಿ, ನಾನಂತೂ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ. ಬಿಜೆಪಿ ಕಾರ್ಯಕ್ರಮ ಎಂದು ಯಾರು ಬೇಕಾದರೂ ಆಪಾದಿಸಬಹುದು. ಆದರೆ ಸದ್ಯಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿದೆ ಎಂಬುದಷ್ಟೇ ಸತ್ಯ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗುವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments