Webdunia - Bharat's app for daily news and videos

Install App

ದೇಶದ್ರೋಹ ಕೇಸ್: ಹಾರ್ದಿಕ್ ಪಟೇಲ್‌ಗೆ ಜಾಮೀನು ಮಂಜೂರು

Webdunia
ಶುಕ್ರವಾರ, 8 ಜುಲೈ 2016 (16:20 IST)
ದೇಶದ್ರೋಹ ಪ್ರಕರಣದಲ್ಲಿ ಆರೋಪಿಯಾಗಿದ್ದ ಪಟೇಲ್ ಹೋರಾಟ ಸಮಿತಿಯ ಮುಖ್ಯಸ್ಥ ಹಾರ್ದಿಕ್ ಪಟೇಲ್‌ಗೆ ಗುಜರಾತ್ ಹೈಕೋರ್ಟ್ ಜಾಮೀನು ನೀಡಿ ಆದೇಶ ಹೊರಡಿಸಿದೆ.
 
ಗುಜರಾತ್‌ನಿಂದ ಆರು ತಿಂಗಳುಗಳ ಕಾಲ ಹೊರಗಿರಬೇಕು ಎನ್ನುವ ಷರತ್ತಿನೊಂದಿಗೆ ಕೋರ್ಟ್ ಹಾರ್ದಿಕ್ ಪಟೇಲ್‌ಗೆ ಜಾಮೀನು ನೀಡಿದೆ. ಆದರೆ, ಪಟೇಲ್ ವಿರುದ್ಧ ಮತ್ತೊಂದು ಪ್ರಕರಣ ವಿಚಾರಣೆ ಹಂತದಲ್ಲಿರುವುದರಿಂದ ಜೈಲುವಾಸದಲ್ಲಿಯೇ ಮುಂದುವರಿಯಲಿದ್ದಾರೆ ಎಂದು ಹಾರ್ದಿಕ್ ಪಟೇಲ್ ಪರ ವಕೀಲ ಝುಬಿನ್ ಭಾರ್ದಾ ತಿಳಿಸಿದ್ದಾರೆ.
 
ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಪಟೇಲ್ ಇನಾಮತ್ ಅಂದೋಲನ್ ಸಮಿತಿ ಮುಖ್ಯಸ್ಥ ಹಾರ್ದಿಕ್ ಪಟೇಲ್‌ರನ್ನು ದೇಶದ್ರೋಹ ಆರೋಪದ ಮೇಲೆ ಬಂಧಿಸಲಾಗಿತ್ತು.
  
ನಿನ್ನೆಯವರೆಗೆ ಗುಜರಾತ್ ಸರಕಾರ ಹಾರ್ದಿಕ್ ಪಟೇಲ್‌ರನ್ನು ಬಿಡುಗಡೆಗೊಳಿಸಿದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ತುಂಬಾ ಕಷ್ಟವಾಗುತ್ತದೆ ಎಂದು ಕೋರ್ಟ್‌ಗೆ ನಿರಂತರವಾಗಿ ಮನವಿ ಮಾಡಿತ್ತು. ಆದರೆ, ಕೋರ್ಟ್ ಇಂದು ರಾಜ್ಯ ಸರಕಾರದ ಮನವಿಯನ್ನು ತಿರಸ್ಕರಿಸಿ ಜಾಮೀನು ಮಂಜೂರು ಮಾಡಿದೆ.
 
ಒಂದು ವೇಳೆ ಕೋರ್ಟ್ ನಿರ್ದೇಶನ ನೀಡಿದಲ್ಲಿ ಜಾಮೀನು ಅವಧಿಯವರೆಗೆ ಹಾರ್ದಿಕ್ ರಾಜ್ಯದಿಂದ ಹೊರಗಿರಲು ಸಿದ್ದವಾಗಿದ್ದಾರೆ. ಪಟೇಲ್ ಮೀಸಲಾತಿ ಹೋರಾಟವನ್ನು ಶಾಂತಿಪೂರ್ವಕವಾಗಿ ಹಮ್ಮಿಕೊಳ್ಳಲಾಗುವುದು ಎಂದು ಪಟೇಲ್ ಅನಾಮತ್ ಸಮಿತಿ ಕೋರ್ಟ್‌ಗೆ  ನಿರಂತರವಾಗಿ ಮನವಿ ಮಾಡಿದ್ದರೂ ಜಾಮೀನು ದೊರೆತಿರಲಿಲ್ಲ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತ: ಸಹೋದರನ ಶವಕ್ಕೆ ಹೆಗಲುಕೊಟ್ಟು ಬಿಕ್ಕಿಬಿಕ್ಕಿ ಅತ್ತ ವಿಶ್ವಾಸ್ ರಮೇಶ್ ವಿಡಿಯೊ ಇಲ್ಲಿದೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಂಚರಿಸುವವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ

ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಹೊಸ ತಿರುವು: ತನಿಖೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

Viral video: ಹೆದ್ದಾರಿಯಲ್ಲಿ ಬೈಕ್ ರೈಡ್ ವೇಳೆ ಜೋಡಿ ಜೀವಗಳ ರೊಮ್ಯಾನ್ಸ್: ಕೊನೆಗೆ ಆಗಿದ್ದೇನು

ಆಪರೇಷನ್ ಸಿಂಧೂರ ವಿರಾಮದಲ್ಲಿ ಅಮೆರಿಕದ ಪಾತ್ರವಿಲ್ಲ: ಟ್ರಂಪ್‌ಗೆ ಪ್ರಧಾನಿ ಮೋದಿ ಮನವರಿಕೆ

ಮುಂದಿನ ಸುದ್ದಿ
Show comments