Webdunia - Bharat's app for daily news and videos

Install App

ಹಿಂಸಾಚಾರದ ಹೊಣೆ ಹೊತ್ತು ಸಿಎಂ ಖಟ್ಟರ್ ರಾಜೀನಾಮೆ ನೀಡಲಿ: ವಾದ್ರಾ

Webdunia
ಭಾನುವಾರ, 27 ಆಗಸ್ಟ್ 2017 (15:19 IST)
ದೇರಾ ಸಚಾ ಸೌದಾ ಪಂಥದ ಮುಖ್ಯಸ್ಥ ಗುರ್ಮೆತ್ ರಾಮ್ ರಹೀಮ್ ಸಿಂಗ್ ಅವರ ಶಿಕ್ಷೆ ಪ್ರಕಟಿಸಿದ ನಂತರ ನಡೆದ ಹಿಂಸಾಚಾರದ ಜವಾಬ್ದಾರಿಯನ್ನು ಹೊತ್ತುಕೊಂಡು ಸಿಎಂ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಆಗ್ರಹಿಸಿದ್ದಾರೆ.
"ಪಂಚಕುಲ ನಗರದಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ ಮತ್ತು 250 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹತ್ಯೆಗೀಡಾದವರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪವಿದೆ. ಹರಿಯಾಣದ ಮುಖ್ಯಮಂತ್ರಿ ಖಟ್ಟರ್, ನೀವು ಭದ್ರತೆಯ ವೈಫಲ್ಯ ಕುರಿತ ಜವಾಬ್ದಾರಿಯನ್ನು ತೆಗೆದುಕೊಂಡು ರಾಜೀನಾಮೆ ನೀಡಬೇಕೆಂದು ರಾಷ್ಟ್ರ ಬಯಸಿದೆ" ಎಂದು ವಾದ್ರಾ ಟ್ವೀಟ್ ಮಾಡಿದ್ದಾರೆ.
 
ದೇರಾ ಮುಖ್ಯಸ್ಥನ ಆಸ್ತಿಯನ್ನು ಹರಾಜು ಮಾಡುವ ಮೂಲಕ ಹಿಂಸಾಚಾರದ ನಷ್ಟವನ್ನು ಸರಿದೂಗಿಸುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನೀಡಿದ ಆದೇಶವನ್ನು ಶ್ಲಾಘಿಸಿದ್ದಾರೆ.
 
ಹರಿಯಾಣದಲ್ಲಿರುವ ಬಿಜೆಪಿ ಸರಕಾರ ಅನಗತ್ಯವಾಗಿ ನನಗೆ ಕಿರುಕುಳ ನೀಡುತ್ತಿದೆ. ಇದೀಗ ರಾಜ್ಯ ಸರ್ಕಾರ ಹತ್ಯಾಕಾಂಡದ ಜವಾಬ್ದಾರಿಯನ್ನು ತೆಗೆದುಕೊಳ್ಳುವ ಸಮಯ ಬಂದಿದೆ ಎಂದು ತಿರುಗೇಟು ನೀಡಿದ್ದಾರೆ.
 
ಪರಿಸ್ಥಿತಿ ಉಲ್ಬಣಗೊಳ್ಳಲು ಅವಕಾಶ ನೀಡಿರುವ ಖಟ್ಟಾರ್ ಸರಕಾರಕ್ಕೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ ಹಾಕಿದ ಛೀಮಾರಿಯನ್ನು ನಾನು ಸ್ವಾಗತಿಸುತ್ತೇನೆ ಎಂದು ರಾಬರ್ಟ್ ವಾದ್ರಾ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

ಮುಂದಿನ ಸುದ್ದಿ
Show comments