Webdunia - Bharat's app for daily news and videos

Install App

Haryana Elections: ಹರ್ಯಾಣದಲ್ಲಿ ಕೌಂಟಿಂಗ್ ಸರಿ ಇಲ್ಲ, ಜಮ್ಮು ಕಾಶ್ಮೀರದಲ್ಲಿ ಸರಿ ಇದೆ: ಕಾಂಗ್ರೆಸ್ ಆರೋಪ

Krishnaveni K
ಮಂಗಳವಾರ, 8 ಅಕ್ಟೋಬರ್ 2024 (13:55 IST)
ಹರ್ಯಾಣ: ಸತತ ಮೂರನೇ ಬಾರಿಗೆ ಹರ್ಯಾಣದಲ್ಲಿ ಬಿಜೆಪಿ ಅಧಿಕಾರಕ್ಕೇರಲು ಹೊರಟಿದೆ. ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದತ್ತ ಬಿಜೆಪಿ ಸಾಗುತ್ತಿದ್ದರೆ ಇತ್ತ ಕಾಂಗ್ರೆಸ್ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ಹೊರಹಾಕಿದೆ.

ಹರ್ಯಾಣದಲ್ಲಿ ಈ ಬಾರಿ ತಮ್ಮ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂಬ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಗೆ ಈ ಫಲಿತಾಂಶ ಶಾಕ್ ನೀಡಿದೆ. ಇದುವರೆಗೆ ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ ಕಾಂಗ್ರೆಸ್ 35 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಇತರರು 5 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.

ಹರ್ಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವಿನತ್ತ ಸಾಗಿದೆ. ಇದರ ನಡುವೆ ಕಾಂಗ್ರೆಸ್ ನಾಯಕ ಜೈ ರಾಂ ರಮೇಶ್ ಚುನಾವಣಾ ಆಯೋಗದ ವಿರುದ್ಧ ಕಿಡಿ ಕಾರಿದ್ದಾರೆ. ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಫಲಿತಾಂಶ ಟ್ರೆಂಡ್ ನಿಧಾನವಾಗಿ ತೋರಿಸಲಾಗುತ್ತಿದೆ. ಸರಿಯಾಗಿ ಅಪ್ ಡೇಟ್ ಆಗುತ್ತಿಲ್ಲ. ಈ ಮೂಲಕ ಬಿಜೆಪಿ ಒತ್ತಡ ಹೇರಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಹಿಂದೆ ಲೋಕಸಭೆ ಚುನಾವಣೆ ವೇಳೆಯೂ ಈ ಪರಿಸ್ಥಿತಿಯಿತ್ತು. ನಿಜವಾಗಿ ಮತ ಎಣಿಕೆ ಆಗಿರುವುದಕ್ಕೂ ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ತೋರಿಸುವ ಅಂಕಿ ಅಂಶಕ್ಕೂ ವ್ಯತ್ಯಾಸ ಕಾಣಿಸುತ್ತಿದೆ. 11 ನೇ ಸುತ್ತಿನ ಮತ ಎಣಿಕೆಯಾಗಿದ್ದರೂ ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ 4 ಅಥವಾ 5 ನೇ ಸುತ್ತಿನ ಮತ ಎಣಿಕೆ ಮುಗಿದಿದೆ ಎಂದು ತೋರಿಸುತ್ತಿದೆ. ಜಮ್ಮು ಕಾಶ್ಮೀರದಲ್ಲಿ ಲೈವ್ ಆಗಿ ಮತ ಎಣಿಕೆ ಅಂಕಿ ಅಂಶ ಸಿಗುತ್ತಿದೆ. ಆದರೆ ಹರ್ಯಾಣದಲ್ಲಿ ಮಾತ್ರ ನಿಧಾನವಾಗಿ ತೋರಿಸಲಾಗುತ್ತಿದೆ ಎಂದು ಜೈ ರಾಂ ರಮೇಶ್ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments