Webdunia - Bharat's app for daily news and videos

Install App

Haryana murder: ಹೆಂಡತಿ ಜೊತೆಗೆ ಬಾಡಿಗೆದಾರನ ಕಳ್ಳ ಸಂಬಂಧ: ಓನರ್ ಮಾಡಿದ ಎದೆ ಝಲ್ಲೆನಿಸುವ ಕೃತ್ಯದ ಫೋಟೋ ನೋಡಿ

Krishnaveni K
ಬುಧವಾರ, 26 ಮಾರ್ಚ್ 2025 (09:25 IST)
Photo Credit: X
ಹರ್ಯಾಣ: ಹೆಂಡತಿ ಜೊತೆ ಬಾಡಿಗೆದಾರನ ಕಳ್ಳ ಸಂಬಂಧ ತಿಳಿದ ಮನೆ ಮಾಲಿಕ ಆತನನ್ನು ಜೀವಂತವಾಗಿ ಹೂತು ಹಾಕಿದ ಎದೆ ಝಲ್ಲೆನಿಸುವ ಕೃತ್ಯದ ಫೋಟೋ ಇಲ್ಲಿದೆ ನೋಡಿ.

ಈ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಹರ್ಯಾಣದ ರೋಹ್ಟಕ್ ನಲ್ಲಿ ಘಟನೆ ನಡೆದಿದೆ. ಕಳೆದ ಡಿಸೆಂಬರ್ ನಲ್ಲೇ ಘಟನೆ ನಡೆದಿತ್ತು. ಇದೀಗ ಪೊಲೀಸರು ತನಿಖೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಕೃತ್ಯ ನೋಡಿದ ಪೊಲೀಸರೇ ಅರೆಕ್ಷಣ ಬೆಚ್ಚಿಬಿದ್ದಿದ್ದಾರೆ.

ಆರೋಪಿ, ಮನೆ ಮಾಲಿಕ ಜಗದೀಪ್ ಯೋಗ ಶಿಕ್ಷಕನಾಗಿದ್ದ. ಹರ್ದೀಪ್ ಎಂಬಾತ ಕೊಲೆಯಾದ ಬಾಡಿಗೆದಾರ. ಜಗದೀಪ್ ಪತ್ನಿ ಜೊತೆ ಹರ್ದೀಪ್ ಅಕ್ರಮ ಸಂಬಂಧವಿಟ್ಟುಕೊಂಡಿದ್ದ. ಇದು ಜಗದೀಪ್ ಗಮನಕ್ಕೆ ಬಂದಿತ್ತು.

ಇದರಿಂದ ರೊಚ್ಚಿಗೆದ್ದ ಜಗದೀಪ್ ತನ್ನ ಸ್ನೇಹಿತರ ಜೊತೆಗೆ ಕೊಲೆಗೆ ಸ್ಕೆಚ್ ಹಾಕಿದ್ದ. ಇದಕ್ಕೆ ಪೂರ್ವ ಸಿದ್ಧತೆಯಾಗಿ ತನ್ನ ಗ್ರಾಮದಲ್ಲಿ 7 ಅಡಿ ಗುಂಡಿ ತೋಡಿಸಿದ್ದ. ಯಾಕೆ ಎಂದು ಕೇಳಿದ್ದಕ್ಕೆ ಇದು ಬೋರ್ ವೆಲ್ ಗಾಗಿ ಎಂದಿದ್ದ.  ನಂತರ ಸ್ನೇಹಿತರ ಸಹಾಯದೊಂದಿಗೆ ಹರ್ದೀಪ್ ನನ್ನು ಅಪಹರಿಸಿ ಕೈ ಕಾಲು ಕಟ್ಟಿ, ಬಾಯಿಗೆ ಟೇಪ್ ತುರುಕಿ ಏಳು ಅಡಿ ಗುಂಡಿ ತೋಡಿ ಅದರಲ್ಲಿ ಜೀವಂತ ಹೂತು ಹಾಕಿದ್ದ.

ಕೊಲೆಯಾದ 10 ದಿನಗಳ ಬಳಿಕ ಶಿವಾಜಿ ಕಾಲೊನಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಈ ಸಂಬಂಧ ತನಿಖೆ ನಡೆಸಿದ ಪೊಲೀಸರಿಗೆ ಜಗದೀಪ್ ನ ಬಗ್ಗೆ ಅನುಮಾನವಾಗಿತ್ತು. ಆತನ ಫೋನ್ ಕರೆಗಳನ್ನು ಪರಿಶೀಲಿಸಿ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಪ್ರಕರಣ ಬಯಲಿಗೆ ಬಂದಿದೆ. ಹರ್ದೀಪ್ ನನ್ನು ಹೂತು ಹಾಕಿದ ಗುಂಡಿ ಅಗೆಸಿ ಮೃತದೇಹವನ್ನು ಹೊರತೆಗೆಯಲಾಗಿದೆ. ಹತ್ಯೆಗೆ ಸಹಾಯ ಮಾಡಿದ ಜಗದೀಪ್ ಸ್ನೇಹಿತರಿಗಾಗಿ ಹುಡುಕಾಟ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments