Webdunia - Bharat's app for daily news and videos

Install App

ಪಾಣಿಪತ್ ನಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಗಾಯಕಿ ಬಲಿ

Webdunia
ಗುರುವಾರ, 19 ಅಕ್ಟೋಬರ್ 2017 (12:13 IST)
ಹರಿಯಾಣ: ದುಷ್ಕರ್ಮಿಗಳು ಗಾಯಕಿಗೆ ಗುಂಡಿಟ್ಟು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಪಾಣಿಪತ್‌ ನ ಇಸ್ರಾನಾ ಎಂಬಲ್ಲಿ ನಡೆದಿದೆ.

ಹರ್ಷಿತಾ ದಾಹಿಯಾ(22) ಹತ್ಯೆಯಾದ ಗಾಯಕಿ. ನಿನ್ನೆ ಸಂಜೆ ಕಾರ್ಯಕ್ರಮ ಮುಗಿಸಿ ದೆಹಲಿಯ ನರೇಲಾದ ತಮ್ಮ ನಿವಾಸಕ್ಕೆ ವಾಪಸಾಗುತ್ತಿದ್ದ ವೇಳೆ ಸುಮಾರು 4.15ರಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ಬಂದ ಐವರು ದುಷ್ಕರ್ಮಿಗಳು ಹರ್ಷಿತಾ ಪ್ರಯಾಣಿಸುತ್ತಿದ್ದ ಕಾರನ್ನು ಹಿಂಬಾಲಿಸಿದ್ದಾರೆ. ಚಾಮ್ರಾರಾ ಎಂಬಲ್ಲಿ ಅಡ್ಡಗಟ್ಟಿದ್ದು, ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ.

ಭೀಕರ ಗುಂಡಿನ ದಾಳಿಗೆ ಗಾಯಕಿ ಹರ್ಷಿತಾ ಸ್ಥಳದಲ್ಲೇ ಮೃತಪಟ್ಟಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹರ್ಷಿತಾ ಸಹೋದರಿ ಲತಾ, ಘಟನೆಗೆ ನನ್ನ ಪತಿ ದಿನೇಶ್ ಕಾರಣ. ತಾಯಿಯ ಹತ್ಯೆ ಪ್ರಕರಣದಲ್ಲಿ ಹರ್ಷಿತಾ ಮುಖ್ಯ ಸಾಕ್ಷಿಯಾಗಿದ್ದಳು ಎಂದು ಹೇಳಿಕೆ ನೀಡಿದ್ದಾಳೆ. ಈ ಕುರಿತು ಪಾಣಿಪತ್ ಪೊಲೀಸರು ಸಹ ತನಿಖೆ ನಡೆಸುತ್ತಿದ್ದಾರೆ.

2014ರಲ್ಲಿ ಹರ್ಷಿತಾ ದಿನೇಶ್ ವಿರುದ್ಧ ರೇಪ್ ಕೇಸ್ ದಾಖಲಿಸಿದ್ದಳು. ಇದಾದ ಸ್ವಲ್ಪ ದಿನದಲ್ಲಿ ತನ್ನ ತಾಯಿಯನ್ನು ದಿನೇಶ್ ಹತ್ಯೆ ಮಾಡಿರುವುದಾಗಿ ಪ್ರಕರಣ ದಾಖಲಿಸಿದ್ದಳು. ಇಷ್ಟೇ ಅಲ್ಲದೆ ಆತನ ವಿರುದ್ಧ ಸಾಕಷ್ಟು ಕ್ರಿಮಿನಲ್ ಕೇಸ್ ದಾಖಲಾಗಿದ್ದು, ಜೈಲು ಶಿಕ್ಷೆ ಕೂಡ ಅನುಭವಿಸಿದ್ದಾನೆ ಎಂದು ಪಾಣಿಪತ್ ಡಿಎಸ್ಪಿ ದೇಶ್ ರಾಜ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments