Select Your Language

Notifications

webdunia
webdunia
webdunia
webdunia

ಹರಿಯಾಣ ಹಿಂಸಾಚಾರ; ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಹರಿಯಾಣ ಹಿಂಸಾಚಾರ; ಸಾವಿನ ಸಂಖ್ಯೆ 6ಕ್ಕೆ ಏರಿಕೆ
ಹರಿಯಾಣ , ಗುರುವಾರ, 3 ಆಗಸ್ಟ್ 2023 (17:32 IST)
ಕಳೆದ ಎರಡು ದಿನಗಳ ಹಿಂದೆ ಹರಿಯಾಣದ ನೂಹ್​ನಲ್ಲಿ ಆರಂಭವಾದ ಹಿಂಸಾಚಾರವು ಇದೀಗ ಗುರುಗ್ರಾಮವನ್ನು ತಲುಪಿದೆ. ನಿನ್ನೆ ರಾತ್ರಿ ಅಲ್ಲಿಯ ಮಸೀದಿ ಮೇಲೆ ದಾಳಿ ನಡೆಸಿದ ಗುಂಪೊಂದು ಧರ್ಮಗುರುವನ್ನು ಹತ್ಯೆ ಮಾಡಿದೆ. ಅಷ್ಟೇ ಅಲ್ಲದೇ ಅಂಗಡಿಗಳಿಗೂ ಬೆಂಕಿ ಹಚ್ಚಿದೆ. ಹಿಂಸಾಚಾರದಲ್ಲಿ ಇಬ್ಬರು ಹೋಮ್​ಗಾರ್ಡ್ಸ್​ ಸೇರಿದಂತೆ 6 ಮಂದಿ ಸಾವನ್ನಪ್ಪಿದ್ದು, ನುಹ್​ನಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಹಿಂಸಾಚಾರವನ್ನು ನಿಯಂತ್ರಿಸಲು ಅರೆಸೇನಾ ಪಡೆಗಳ 20 ಮಂದಿಯನ್ನು ನಿಯೋಜಿಸಲಾಗಿದೆ. ಹಿಂಸಾಚಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ ಇಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಮತ್ತೊಂದೆಡೆ ಹರಿಯಾಣದಲ್ಲಿ ಹಿಂಸಾಚಾರದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ 11 ಜಿಲ್ಲೆಗಳಲ್ಲಿ ಹೈ ಅಲರ್ಟ್​ ನೀಡಲಾಗಿದೆ. ರಾಜಸ್ಥಾನದ ಭರತ್​ಪುರದ ನಂತರ ಅಲ್ವಾರ್​ನಲ್ಲಿ ಸೆಕ್ಷನ್ 144ನ್ನ ಜಾರಿಗೊಳಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿ ಕೊಂದು, ಪತಿಯೂ ಆತ್ಮಹತ್ಯೆ