Webdunia - Bharat's app for daily news and videos

Install App

ಅನೈತಿಕ ಸಂಬಂಧ ಪ್ರಶ್ನಿಸಿದ ಪತಿಯನ್ನು 8 ತುಂಡುಗಳಾಗಿ ಕತ್ತರಿಸಿದ್ದ ಪತ್ನಿಗೆ 30 ವರ್ಷ ಜೈಲು

Webdunia
ಗುರುವಾರ, 23 ನವೆಂಬರ್ 2017 (15:59 IST)
ಕಳೆದ 2016ರಲ್ಲಿ ಅನೈತಿಕ ಸಂಬಂಧ ಪ್ರಶ್ನಿಸಿದ್ದ ಪತಿಯನ್ನು ಎಂಟು ತುಂಡುಗಳಾಗಿ ಕತ್ತರಿಸಿದ್ದ ಪತ್ನಿಗೆ ನ್ಯಾಯಾಲಯ 30 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. 
 
ಈ ಅಪರಾಧದಲ್ಲಿ ನೆರವಾದ ಮಹಿಳೆಯ ಪ್ರಿಯಕರನಿಗೆ ಕೂಡ ಇದೇ ಶಿಕ್ಷೆಯನ್ನು ವಿಧಿಸಿ ಕೋರ್ಟ್ ಆದೇಶ ನೀಡಿದೆ.
 
30 ವರ್ಷ ವಯಸ್ಸಿನ ಆರೋಪಿ ಪೂಜಾ, ತನ್ನ ನೆರೆಮನೆಯಾತನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರು. ಆಕೆಯ ಪತಿ ಬಲ್ಜಿತ್ ಸಿಂಗ್‌ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದರಿಂದ ಆಕ್ರೋಶಗೊಂಡ ಪತ್ನಿ, ಪತಿಯ ದೇಹವನ್ನು ಎಂಟು ತುಂಡುಗಳಾಗಿ ಕತ್ತರಿಸಿ ನಗರದ ವಿವಿಧ ಭಾಗಗಳಲ್ಲಿ ಎಸೆದಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಎರಡು ಕಡೆಯ ವಾದ ವಿವಾದಗಳನ್ನು ಆಲಿಸಿದ ನಂತರ ಆರೋಪಿಗಳು ವ್ಯವಸ್ಥಿತವಾಗಿ ಬಲ್ಜಿತ್‌ನನ್ನು ಹತ್ಯೆ ಮಾಡಿ ಆತನ ಶವದ ಮುಂದೆ ಸೆಕ್ಸ್ ನಡೆಸಿರುವುದು ಸಾಬೀತಾಗಿದೆ ಎಂದು ಹೆಚ್ಚುವರಿ ನ್ಯಾಯಮೂರ್ತಿ ಎಚ್.ಎಸ್.ದಹಿಯಾ ತೀರ್ಪಿನಲ್ಲಿ ತಿಳಿಸಿದ್ದಾರೆ,  
 
ಹತ್ಯೆಯಾದ ಬಲ್ಜಿತ್ ಸಹೋದರ ಕುಲ್ಜಿತ್ ಸಿಂಗ್ ಸಹೋದರ ಕಾಣೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಆತನ ಇಬ್ಬರು ಸಹೋದರಿಯರು ಕೂಡಾ ಸಹೋದರ ಬಲ್ಜಿತ್ ಹತ್ಯೆಯಾಗಿರುವ ಅನುಮಾನ ವ್ಯಕ್ತಪಡಿಸಿದ್ದಾರೆ. ಬಲ್ಜಿತ್ ಕಾಣೆಯಾಗಲು ಆತನ ಪತ್ನಿಯೇ ಕಾರಣ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
 
ಪೊಲೀಸರು ತನಿಖೆ ನಡೆಸಿದಾಗ ಪೂಜಾ ಪತಿಯ ಹತ್ಯೆ ಮಾಡಿರುವುದು ಕಂಡು ಬಂದಿದೆ. ಪೂಜಾಳನ್ನು ವಿಚಾರಣೆ ನಡೆಸಿದಾಗ ಪ್ರಿಯಕರನ ನೆರವಿನೊಂದಿಗೆ ಪತಿಯನ್ನು ಹತ್ಯೆ ಮಾಡಿ ಸುಟ್ಟು ಹಾಕಿರುವುದಾಗಿ ಒಪ್ಪಿಕೊಂಡಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments