Webdunia - Bharat's app for daily news and videos

Install App

ಹಿಂದೂಗಳೇ 10 ಮಕ್ಕಳನ್ನು ಹಡೆಯಿರಿ, ದೇವರು ನೋಡಿಕೊಳ್ಳುತ್ತಾನೆ

Webdunia
ಸೋಮವಾರ, 26 ಡಿಸೆಂಬರ್ 2016 (11:00 IST)
ಪ್ರತಿ ಹಿಂದೂಗಳ ಮನೆಯಲ್ಲಿ ಹತ್ತತ್ತು ಮಕ್ಕಳಿರಲಿ, ಅವರನ್ನು ದೇವರು ನೋಡಿಕೊಳ್ಳುತ್ತಾನೆ ಎಂದು ವಸುದೇವಾನಂದ ಸರಸ್ವತಿ ಸ್ವಾಮೀಜಿಗಳು ಕರೆ ನೀಡಿದ್ದಾರೆ. 

ನಾಗಪುರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆಯೋಜಿಸಿದ್ದ ಮೂರು ದಿನಗಳ ಧರ್ಮ ಸಂಸ್ಕೃತಿ ಮಹಾಕುಂಭದ ಅಂತಿಮ ದಿನ ಮಾತನಾಡುತ್ತಿದ್ದ ಅವರು, ಹಿಂದೂಗಳ ಜನಸಂಖ್ಯೆ ಕುಗ್ಗುತ್ತಿದ್ದರೆ, ಇತರ ಧರ್ಮೀಯರಲ್ಲಿ ಹೆಚ್ಚುತ್ತಿದೆ ಎಂದು ಕಳವಳವನ್ನು ವ್ಯಕ್ತಪಡಿಸಿದರು. 
 
ಅನ್ಯ ಸಮುದಾಯದಲ್ಲಿ ಏರುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಬೇಕು ಎಂದ ಅವರು ಹಿಂದೂಗಳು ಹತ್ತತ್ತು ಮಕ್ಕಳನ್ನು ಹಡೆಯಬೇಕು. ಅವರನ್ನು ದೇವರು ನೋಡಿಕೊಳ್ಳುತ್ತಾನೆ. ಈ ಮೂಲಕ ನಮ್ಮ ಸಮುದಾಯದ ಜನಸಂಖ್ಯೆಯನ್ನು ಹೆಚ್ಚಿಸಬೇಕು ಎಂದರು.
 
ಮೂರು ದಿನಗಳ ಈ ಕಾರ್ಯಕ್ರಮ ಭಾನುವಾರ " ಸೇವ್ ಹಿಂದೂ" ಕರೆಯೊಂದಿಗೆ ಕೊನೆಗೊಂಡಿತು. 
 
ವಿಪರ್ಯಾಸವೆಂದರೆ ಇದೇ ವೇದಿಕೆಯಲ್ಲಿ ದೇಶದ ಜನಸಂಖ್ಯೆ ನಿಯಂತ್ರಣವಾಗಬೇಕು ಎಂಬ ಕೂಗು ಸಹ ಕೇಳಿ ಬಂತು.
 
ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್, ವಿಶ್ವ ಹಿಂದೂ ಪರಿಷದ್ ಮುಖ್ಯಸ್ಥ ಪ್ರವೀಣ್ ಭಾಯ್ ತೊಗಾಡಿಯಾ ಸಹ ಈ ಕಾರ್ಯಕ್ರಮದಲ್ಲಿ  ಭಾಗವಹಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments