Webdunia - Bharat's app for daily news and videos

Install App

ನನ್ನ ದೇಹ ಮಾರಿ ಕೋಟಿಗಟ್ಟಲೆ ಸಂಪಾದಿಸಿದ್ರು, ನನಗೆ ನ್ಯಾಯ ಕೊಡಿಸಿ !

Webdunia
ಶನಿವಾರ, 18 ಮಾರ್ಚ್ 2023 (11:58 IST)
ಜೈಪುರ : ʻ10 ವರ್ಷದವಳಿದ್ದಾಗ ನನ್ನನ್ನ ಮಾರಾಟ ಮಾಡಿದ್ರು, ಅಂದಿನಿಂದ ಕಾಲ ಕಾಲಕ್ಕೆ ನನ್ನ ದೇಹವನ್ನು ಮಾರಾಟ ಮಾಡಿ ಕೋಟಿಗಟ್ಟಲೇ ಸಂಪಾದಿಸಿದ್ರು. ನಾನೀಗ ನೊಂದಿದ್ದೇನೆ, ನನಗೆ ನ್ಯಾಯ ಕೊಡಿಸಿ..ʼ ವೇಶ್ಯಾವಾಟಿಕೆ ಜಾಲಕ್ಕೆ ಸಿಕ್ಕಿ ನರಳುತ್ತಿದ್ದ ಸಂತ್ರಸ್ತೆಯೊಬ್ಬಳ ಕೂಗು ಇದಾಗಿದೆ.

ಹೌದು. ರಾಜಸ್ಥಾನದ ಬಿಲ್ವಾರದಲ್ಲಿ 10 ವರ್ಷಗಳ ಹಿಂದೆ ಮಾರಾಟವಾಗಿ ವೇಶ್ಯಾವಾಟಿಕೆ ದಂಧೆಗೆ ಸಿಲುಕಿದ್ದ ಹುಡುಗಿಯೊಬ್ಬಳು 8-9 ವರ್ಷಗಳ ಬಳಿಕ ತನ್ನ ಕರಾಳ ಕತೆಯನ್ನು ಹೇಳಿಕೊಂಡಿದ್ದಾಳೆ. ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ವೀಡಿಯೋ ಮಾಡಿಬಿಟ್ಟಿರುವ ಸಂತ್ರಸ್ತೆ ತನ್ನನ್ನು ರಕ್ಷಿಸುವಂತೆ ಪೊಲೀಸರಿಗೆ ಕೇಳಿಕೊಂಡಿದ್ದಾಳೆ.

 
ʻಹಲೋ ನಾನು ಸ್ವಂತ ಇಚ್ಛೆಯ ಮೇಲೆ ಈ ವೀಡಿಯೋ ಮಾಡುತ್ತಿದ್ದೇನೆ. ನಾನು 10 ವರ್ಷದವಳಿದ್ದಾಗ ಮಾಧೋಪುರದಲ್ಲಿ ನನ್ನನ್ನು ಮಾರಾಟ ಮಾಡಿದರು. 11ನೇ ವರ್ಷದಲ್ಲಿ ಬಲವಂತವಾಗಿ ನನ್ನನ್ನ ವೇಶ್ಯಾವಾಟಿಕೆಗೆ ತಳ್ಳಿದರು. ಒಂದೆರಡು ವರ್ಷ ಮಾಧೋಪುರದಲ್ಲಿ ಇಟ್ಟುಕೊಂಡು ನಂತರ ನನ್ನನ್ನು ಬೇರೆ ಸ್ಥಳಕ್ಕೆ ಮಾರಾಟ ಮಾಡಿದರು. ಇಲ್ಲಿನ ಡಿಯೋಲಿ ನಗರದಲ್ಲಿ ಕಿಶನ್ ಎಂಬ ವ್ಯಾಪಾರಿ 20 ಲಕ್ಷ ರೂ.ಗೆ ನನ್ನನ್ನು ಖರೀದಿಸಿ 8-9 ವರ್ಷಗಳ ಕಾಲ ನನ್ನನ್ನು ಬಳಸಿಕೊಂಡು ವ್ಯಾಪಾರ ಮಾಡಿಕೊಂಡ.

ನಂತರ ಜೈಪುರ, ಮುಂಬೈಗೆ ಮಾರಾಟ ಮಾಡಿದ. ಅಲ್ಲಿಯೂ ಕೋಟ್ಯಂತರ ರೂಪಾಯಿ ಸಂಪಾದಿಸಿಕೊಟ್ಟೆ. ಆದರೆ ಶಂಭು ಮತ್ತು ಪ್ರೇಮ್ ಎಂಬ ಇಬ್ಬರು ಕಾಮುಕರು ನನಗೆ ಸಾಕಷ್ಟು ಹಿಂಸೆ ನೀಡಿದರು. ನನಗಷ್ಟೇ ಅಲ್ಲದೇ ಇತರ ಹೆಣ್ಣುಮಕ್ಕಳನ್ನೂ ಹಿಂಸಿಸುತ್ತಿದ್ದರು. ಬೇರೆ ಬೇರೆ ಕಡೆ ವ್ಯಾಪಾರ ಮಾಡುವಂತೆ ಒತ್ತಾಯ ಮಾಡಿದ್ದರು.

ನಾನು ಹಿಂಸೆಯನ್ನೆಲ್ಲಾ ಸಹಿಸಿಕೊಂಡು ಕೋಟ್ಯಂತರ ರೂಪಾಯಿ ಸಂಪಾದಿಸಿಕೊಟ್ಟೆ. ಆದರೀಗ ನಾನು ಇಂತಹ ದೌರ್ಜನ್ಯಗಳಿಂದ ಬೇಸತ್ತಿದ್ದೇನೆ, ತುಂಬಾ ನೊಂದಿದ್ದೇನೆ. ಅವರಿಂದ ನಾನು ತಪ್ಪಿಸಿಕೊಂಡು ಈ ವೀಡಿಯೋ ಮಾಡುತ್ತಿದ್ದೇನೆ. ನನಗೆ ನ್ಯಾಯ ಕೊಡಿಸಿ ಎಂದು ಬೇಡಿಕೊಂಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments