ಗುತ್ತಿಗೆದಾರ ಬಳಿ ಕಮಿಷನ್ ಕೇಳ್ತಿದ್ದಾರೆ : ಸಿ.ಟಿ ರವಿ

Webdunia
ಬುಧವಾರ, 9 ಆಗಸ್ಟ್ 2023 (09:18 IST)
ಬಿಬಿಎಂಪಿ ಗುತ್ತಿಗೆದಾರರಿಂದ ಬಿಲ್ ಪಾವತಿ ಆಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿ.ಟಿ ರವಿ, ಬಿಲ್ ಪಾವತಿ ಮಾಡಲು ಬ್ಲ್ಯಾಕ್ಮೇಲ್ ಮಾಡ್ತಿದ್ದಾರೆ ಅನ್ನೋದು ಗಮನಕ್ಕೆ ಬಂದಿದೆ. ಪಾರದರ್ಶಕತೆ ಆಡಳಿತ ಕೊಡ್ತೀನಿ ಅಂದವರು ಧಮ್ಕಿ ಹಾಕ್ತಿದ್ದಾರೆ.
 
ಈಗಿನ ಬಿಲ್ ಗಳಿಗೆ ಕಮಿಷನ್ ಅಷ್ಟೇ ಅಲ್ಲ, ಕಳೆದ 5 ವರ್ಷಗಳ ಹಿಂದೆ ನಡೆದ ಕಾಮಗಾರಿಗಳ ಬಿಲ್ ಪಾವತಿಗೂ ಕಮಿಷನ್ ಕೇಳ್ತಿದ್ದಾರೆ ಎಂಬ ಮಾಹಿತಿ ಇದೆ. ಡಿಕೆಶಿ ಅವರನ್ನ ಬ್ಲ್ಯಾಕ್ಮೇಲ್ ಮಾಡಲು ಆಗಲ್ಲ. ಏಕೆಂದ್ರೆ ಅವರೇ ಬ್ಲ್ಯಾಕ್ಮೇಲ್ ಮಾಡ್ತಾರೆ. ಅವರನ್ನು ಎದುರಿಸುವ ಶಕ್ತಿ ಯಾರಿಗೂ ಇಲ್ಲ. ಅವರೇ ಎಲ್ಲರನ್ನ ಎದುರಿಸ್ತಾರೆ ಎಂದು ಟಾಂಗ್ ಕೊಟ್ಟಿದ್ದಾರೆ.

ಕೃಷಿ ಸಚಿವರ ವಿರುದ್ಧ ಪತ್ರ ಬರೆದಿದ್ದಾರೆ, ಅದರ ಬಗ್ಗೆ ತನಿಖೆ ನಡೆಸಿ ಅಂತಾ ಹೇಳಿದ್ದಾರೆ. ತನಿಖೆ ನಡೆಸಿ ವರದಿ ಕೊಡಬೇಕಾಗುತ್ತೆ. ಆದ್ರೆ ತನಿಖೆಗೂ ಮೊದಲೇ ನಕಲಿ ಅಂತಾ ಇವರು ಹೇಗೆ ಹೇಳ್ತಾರೆ? ಸಿಎಂ, ಚಲುವರಾಯಸ್ವಾಮಿ ತನಿಖೆ ಸಂಸ್ಥೆಗಳಾ? ಸಿಐಡಿ ತನಿಖೆಗೆ ಕೊಟ್ಟಿದ್ದಾರೆ ಈಗ, ಸಿಐಡಿ ತನಿಖೆ ವರದಿ ಕೊಡಬೇಕಲ್ಲವಾ? ಸಿಐಡಿ ತನಿಖೆಗೂ ಮೊದಲೇ ಪತ್ರ ನಕಲಿ ಅಂದ್ರೆ ನಾವು ಹೇಳಬೇಕಾಗುತ್ತೆ ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳುತ್ತಾರೆ ಅಂತಾ ಎಂದು ವ್ಯಂಗ್ಯವಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

ಮುಂದಿನ ಸುದ್ದಿ
Show comments