Webdunia - Bharat's app for daily news and videos

Install App

ನರೇಂದ್ರ ಮೋದಿ ಬಿಜೆಪಿಯ ಪ್ರಧಾನಿಯಲ್ಲ, ದೇಶದ ಪ್ರಧಾನಿ: ಮೋದಿಯನ್ನೂ ಬಿಡದ ಹೈಕೋರ್ಟ್

Webdunia
ಶನಿವಾರ, 26 ಆಗಸ್ಟ್ 2017 (17:47 IST)
ಸ್ವಯಂಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್‌ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ನಂತರ ನಡೆದ ಹಿಂಸಾಚಾರಕ್ಕೆ ಹರಿಯಾಣಾ ಮತ್ತು ಕೇಂದ್ರ ಸರಕಾರ ಹೊಣೆಯಾಗಿದೆ. ನರೇಂದ್ರ ಮೋದಿ ಬಿಜೆಪಿಯ ಪ್ರಧಾನಿಯಲ್ಲ ದೇಶದ ಪ್ರಧಾನಿಯಾಗಿದ್ದಾರೆ ಎಂದು ಪಂಜಾಬ್ ಮತ್ತು ಹರಿಯಾಣಾ ಹೈಕೋರ್ಟ್ ಕಿಡಿಕಾರಿದೆ.
ನಿನ್ನೆ ನಡೆದ ಹಿಂಸಾಚಾರ ರಾಜ್ಯಕ್ಕೆ ಸಂಬಂಧಿಸಿದ್ದಾಗಿದೆ ಎಂದು ಕೇಂದ್ರ ಸರಕಾರದ ಪ್ರತಿನಿಧಿಯಾಗಿ ಕೋರ್ಟ್‌ ಕಲಾಪದಲ್ಲಿ ಭಾಗಿಯಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಸತ್ಯಪಾಲ್ ಜೈನ್ ನೀಡಿದ ಹೇಳಿಕೆಯಿಂದ ಕೆಂಡಾಮಂಡಲವಾದ ಕೋರ್ಟ್, ಹರಿಯಾಣಾ ಭಾರತದ ಒಂದು ಭಾಗವಲ್ಲವೇ? ಪಂಜಾಬ್ ಮತ್ತು ಹರಿಯಾಣಾವನ್ನು ಕೇಂದ್ರ ಸರಕಾರ ಯಾಕೆ ಮಲತಾಯಿ ಮಕ್ಕಳಂತೆ ನೋಟಿಕೊಳ್ಳುತ್ತಿದೆ ಎಂದು ಪ್ರಶ್ನಿಸಿತು.   
 
ಇದಕ್ಕೂ ಮೊದಲು, ಹರಿಯಾಣಾ ಸರಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಹೈಕೋರ್ಟ್, ಕೇವಲ ರಾಜಕೀಯ ಲಾಭಕ್ಕಾಗಿ ಪಂಚಕುಲಾ ನಗರವನ್ನು ಸುಟ್ಟು ಭಸ್ಮವಾಗಲು ಕಾರಣವಾಗಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿತು.  
 
ರಾಮ್ ರಹೀಮ್ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿ ಎಂದು ತೀರ್ಪು ಬಂದ ಕೂಡಲೇ ಅವರ ಬೆಂಬಲಿಗರು ಹಲವಾರು ವಾಹನಗಳು, ಆಸ್ತಿಗಳಿಗೆ ಬೆಂಕಿಯಿಟ್ಟು ಆಕ್ರೋಶ ವ್ಯಕ್ತಪಡಿಸಿ 35ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಭಾರತೀಯ ಸೇನಾ ದಾಳಿಗೆ ಆಪರೇಷನ್ ಸಿಂದೂರ್ ಎಂದೇ ಹೆಸರಿಟ್ಟಿದ್ದೇಕೆ ಇಲ್ಲಿದೆ ಕಾರಣ

Operation Sindoor: ಮೋದಿಗೆ ಹೇಳಿ ಎಂದಿದ್ದಕ್ಕೆ ತಕ್ಕ ಉತ್ತರ ಕೊಟ್ಟ ಮೋದಿ

India Pakistan Operation Sindoor: ಭಾರತ ದಾಳಿ ನಡೆಸಿದ 9 ಸ್ಥಳಗಳು ಯಾವುದೆಲ್ಲಾ

India Pakistan Operation Sindoor: ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ, 9 ಕಡೆ ದಾಳಿ Video

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಮುಂದಿನ ಸುದ್ದಿ
Show comments