Select Your Language

Notifications

webdunia
webdunia
webdunia
webdunia

ಸರಿಯಾಗಿ ಅಡುಗೆ ಮಾಡಲಿಲ್ಲವೆಂದು ಮಗಳನ್ನೇ ಕೊಂದರು!

ಸರಿಯಾಗಿ ಅಡುಗೆ ಮಾಡಲಿಲ್ಲವೆಂದು ಮಗಳನ್ನೇ ಕೊಂದರು!
ರಾಯಪುರ , ಬುಧವಾರ, 31 ಆಗಸ್ಟ್ 2022 (11:21 IST)
ರಾಯಪುರ : ಸಮಯಕ್ಕೆ ಸರಿಯಾಗಿ ಅಡುಗೆ ಮಾಡಲಿಲ್ಲವೆಂಬ ಕಾರಣಕ್ಕೆ ಸ್ವತಃ ಪೋಷಕರೇ 12 ವರ್ಷದ ಮಗಳನ್ನು ಕೊಂದು ಮೃತದೇಹವನ್ನು ಕಾಡಿನಲ್ಲಿ ಎಸೆದಿದ್ದ ಘಟನೆ ಛತ್ತಿಸ್ಗಢದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ತಂದೆ ವಿಶ್ವನಾಥ್ ಎಕ್ಕಾ ಮತ್ತು ಅವರ ಪತ್ನಿ ದಿಲ್ಸಾ ಎಕ್ಕಾ ಇಬ್ಬರನ್ನು ಬಂಧಿಸಲಾಗಿದೆ.

ಈ ವರ್ಷ ಜೂನ್ ನಲ್ಲಿ ಘಟನೆ ನಡೆದಿತ್ತು. ಕೃತ್ಯ ಎಸಗಿದ್ದ ಪೋಷಕರು ತನಿಖೆಯ ದಾರಿ ತಪ್ಪಿಸುವ ಉದ್ದೇಶದಿಂದ ಮಗಳನ್ನು ತಾವೇ ಕೊಂದು ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದರು ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಯು ಬಿಜೆಪಿಯೊಂದಿಗಿನ ಮೈತ್ರಿ ವಾಪಸ್?