ರಾತ್ರಿ ಊಟ ಬಡಿಸಲು ನಿರಾಕರಿಸಿದ್ದಕ್ಕೆ ಪತ್ನಿಯನ್ನು ಕೊಡಲಿಯಿಂದ ಕೊಂದ!

Webdunia
ಬುಧವಾರ, 28 ಡಿಸೆಂಬರ್ 2022 (13:45 IST)
ರಾಯ್ಪುರ್ : ರಾತ್ರಿ ಊಟ ನೀಡಲು ನಿರಾಕರಿಸಿದ ಪತ್ನಿಯನ್ನು ಕೊಡಲಿಯಿಂದ ಕೊಂದ ಘಟನೆ ಛತ್ತಿಸ್ಗಢದಲ್ಲಿ ನಡೆದಿದೆ.

ಮಂಜೀತಾ ಶ್ರೀವಾಸ್ (32) ಮೃತ ಮಹಿಳೆ. ಈಕೆಯ ಪತಿ ಯೋಗೇಂದ್ರ ಶ್ರೀನಿವಾಸ್ (38) ಕೊರ್ಬಾದ ಖಾಸಗಿ ಕ್ಲಿನಿಕ್ನಲ್ಲಿ ಕಾಂಪೌಂಡರ್ ಆಗಿ ಕೆಲಸ ಮಾಡುತ್ತಿದ್ದ. ಈ ಹಿನ್ನೆಲೆಯಲ್ಲಿ ಯೋಗೇಂದ್ರ ರಾತ್ರಿ ಕೆಲಸ ಮುಗಿಸಿ ಹಿಂತಿರುಗಿ ಪುಸ್ತಕ ಓದುತ್ತಿದ್ದಾಗ ಪತ್ನಿಗೆ ಊಟ ಬಡಿಸುವಂತೆ ಕೇಳಿದ್ದ. ಆದರೆ ಮಂಜೀತಾ ಊಟ ನೀಡಲು ನಿರಾಕರಿಸಿದ್ದಾಳೆ.

ಇದೇ ಕಾರಣಕ್ಕೆ ಯೋಗೇಂದ್ರ ಹಾಗೂ ಮಂಜೀತಾ ನಡುವೆ ಜಗಳವಾಗಿದೆ. ಈ ವೇಳೆ ಕೋಪದ ಭರದಲ್ಲಿ ಯೋಗೇಂದ್ರ ಪತ್ನಿ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ ಮಂಜೀತಾ ಜೋರಾಗಿ ಕಿರುಚಿದ್ದಾಳೆ.

ತಾಯಿಯ ಕಿರುಚಾಟ ಕೇಳಿದ ಯೋಗೇಂದ್ರ ಹಾಗೂ ಮಂಜಿತಾ ಮಕ್ಕಳು ಸ್ಥಳಕ್ಕೆ ಓಡಿ ಹೋಗಿದ್ದಾರೆ. ಈ ವೇಳೆ ರಕ್ತದ ಮಡುವಿನಲ್ಲಿ ಬಿದ್ದಿರುವ ತಾಯಿಯನ್ನು ನೋಡಿದ್ದಾರೆ. 

ಕೂಡಲೇ ತಾಯಿ ಕೊಲೆಯಾದ ಬಗ್ಗೆ ಮಕ್ಕಳು ಅಕ್ಕಪಕ್ಕದ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಅದಾದ ಬಳಿಕ ಘಟನೆಗೆ ಸಂಬಂಧಿಸಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ಮುಂದಿನ ಸುದ್ದಿ
Show comments