Webdunia - Bharat's app for daily news and videos

Install App

ರಾತ್ರಿ ಊಟ ಬಡಿಸಲು ನಿರಾಕರಿಸಿದ್ದಕ್ಕೆ ಪತ್ನಿಯನ್ನು ಕೊಡಲಿಯಿಂದ ಕೊಂದ!

Webdunia
ಬುಧವಾರ, 28 ಡಿಸೆಂಬರ್ 2022 (13:45 IST)
ರಾಯ್ಪುರ್ : ರಾತ್ರಿ ಊಟ ನೀಡಲು ನಿರಾಕರಿಸಿದ ಪತ್ನಿಯನ್ನು ಕೊಡಲಿಯಿಂದ ಕೊಂದ ಘಟನೆ ಛತ್ತಿಸ್ಗಢದಲ್ಲಿ ನಡೆದಿದೆ.

ಮಂಜೀತಾ ಶ್ರೀವಾಸ್ (32) ಮೃತ ಮಹಿಳೆ. ಈಕೆಯ ಪತಿ ಯೋಗೇಂದ್ರ ಶ್ರೀನಿವಾಸ್ (38) ಕೊರ್ಬಾದ ಖಾಸಗಿ ಕ್ಲಿನಿಕ್ನಲ್ಲಿ ಕಾಂಪೌಂಡರ್ ಆಗಿ ಕೆಲಸ ಮಾಡುತ್ತಿದ್ದ. ಈ ಹಿನ್ನೆಲೆಯಲ್ಲಿ ಯೋಗೇಂದ್ರ ರಾತ್ರಿ ಕೆಲಸ ಮುಗಿಸಿ ಹಿಂತಿರುಗಿ ಪುಸ್ತಕ ಓದುತ್ತಿದ್ದಾಗ ಪತ್ನಿಗೆ ಊಟ ಬಡಿಸುವಂತೆ ಕೇಳಿದ್ದ. ಆದರೆ ಮಂಜೀತಾ ಊಟ ನೀಡಲು ನಿರಾಕರಿಸಿದ್ದಾಳೆ.

ಇದೇ ಕಾರಣಕ್ಕೆ ಯೋಗೇಂದ್ರ ಹಾಗೂ ಮಂಜೀತಾ ನಡುವೆ ಜಗಳವಾಗಿದೆ. ಈ ವೇಳೆ ಕೋಪದ ಭರದಲ್ಲಿ ಯೋಗೇಂದ್ರ ಪತ್ನಿ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ ಮಂಜೀತಾ ಜೋರಾಗಿ ಕಿರುಚಿದ್ದಾಳೆ.

ತಾಯಿಯ ಕಿರುಚಾಟ ಕೇಳಿದ ಯೋಗೇಂದ್ರ ಹಾಗೂ ಮಂಜಿತಾ ಮಕ್ಕಳು ಸ್ಥಳಕ್ಕೆ ಓಡಿ ಹೋಗಿದ್ದಾರೆ. ಈ ವೇಳೆ ರಕ್ತದ ಮಡುವಿನಲ್ಲಿ ಬಿದ್ದಿರುವ ತಾಯಿಯನ್ನು ನೋಡಿದ್ದಾರೆ. 

ಕೂಡಲೇ ತಾಯಿ ಕೊಲೆಯಾದ ಬಗ್ಗೆ ಮಕ್ಕಳು ಅಕ್ಕಪಕ್ಕದ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಅದಾದ ಬಳಿಕ ಘಟನೆಗೆ ಸಂಬಂಧಿಸಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments