Webdunia - Bharat's app for daily news and videos

Install App

ಮಮತಾ ಆಡಳಿತದಲ್ಲಿ ಭಯೋತ್ಪಾದಕರಿಗೆ ಸ್ವರ್ಗ ಹೇಳಿಕೆ: ಬಿಜೆಪಿ ವಿರುದ್ಧ ಬಂಗಾಳ ದೀದಿ ವಾಗ್ದಾಳಿ

Sampriya
ಶುಕ್ರವಾರ, 12 ಏಪ್ರಿಲ್ 2024 (16:46 IST)
ಬೆಂಗಳೂರು: ಬಂಗಾಳ ಅಸುರಕ್ಷಿತ ಎಂಬ ಬಿಜೆಪಿ ಹೇಳಿಕೆಗಳನ್ನು ಉಲ್ಲೇಖಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್ ಮತ್ತು ಬಿಹಾರ ಸುರಕ್ಷಿತವಾಗಿದೆಯೇ ಎಂದು ಗುಡುಗಿದ್ದಾರೆ.

 ರಾಮೇಶ್ವರಂ ಕೆಫೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಕೋಲ್ಕತ್ತಾದಲ್ಲಿ ಬಂಧಿಸಿದ  ಬಂಧನದ ಬೆನ್ನಲ್ಲೇ  ಬಿಜೆಪಿಯ ಬಂಗಾಳದ ಸಹ-ಪ್ರಭಾರಿ ಅಮಿತ್ ಮಾಳವಿಯಾ  ಅವರು ಎಕ್ಸ್‌ ಖಾತೆಯಲ್ಲಿ ಬರೆದು, ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಭಯೋತ್ಪಾದಕರಿಗೆ ಸ್ವರ್ಗವಾಗಿದೆ  ಎಂದು ಹೇಳಿದ್ದರು.

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಬಿಜೆಪಿ ವಿರುದ್ಧ ಗುಡುಗಿದರು.

ಬೆಂಗಳೂರಿನಲ್ಲಿ ಸ್ಫೋಟ ಸಂಭವಿಸಿದೆ. ಆರೋಪಿಗಳು ಕೂಡ ಕರ್ನಾಟಕದವರು. ಅವರು ಬಂಗಾಳದವರಲ್ಲ. ಇನ್ನೂ ಆರೋಪಿಗಳನ್ನು ಎರಡು ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದು, ಇದೊಂದು ಬಿಜೆಪಿಯ ಪ್ರಚಾರದ ಗಿಮಿಕ್ ಎಂದು  ಬ್ಯಾನರ್ಜಿ ಕೂಚ್ ಬಿಹಾರ್‌ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಹೇಳಿದರು.

ಬಂಗಾಳ ಅಸುರಕ್ಷಿತವಾಗಿದೆ ಎಂಬ ಹೇಳಿಕೆಗಳನ್ನು ಉಲ್ಲೇಖಿಸಿದ ಅವರು ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್ ಮತ್ತು ಬಿಹಾರ ಸುರಕ್ಷಿತವಾಗಿದೆಯೇ ಎಂದು ಪ್ರಶ್ನಿಸಿದರು.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಬ್ಬರು ಶಂಕಿತರನ್ನು ಬಂಧಿಸಿದ ನಂತರ ಬಿಜೆಪಿ ಬ್ಯಾನರ್ಜಿ ಸರ್ಕಾರದ ಮೇಲೆ ದಾಳಿ ನಡೆಸಿತು.

ರಾಮೇಶ್ವರಂ ಕೆಫೆ ಸ್ಫೋಟದ ಇಬ್ಬರು ಪ್ರಮುಖ ಶಂಕಿತ ಆರೋಪಿಗಳಾದ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸಹಚರ ಅಬ್ದುಲ್ ಮಥೀನ್ ಅಹ್ಮದ್ ತಾಹಾ ಅವರನ್ನು ಕೋಲ್ಕತ್ತಾದಿಂದ ಎನ್‌ಐಎ ಬಂಧಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments