ಮಹಾಮಳೆಗೆ ಮುಳುಗಿದ ಮುಂಬೈ ನಗರ..!

Webdunia
ಮಂಗಳವಾರ, 29 ಆಗಸ್ಟ್ 2017 (14:09 IST)
ಧೋ ಎಂದು ಸುರಿಯುತ್ತಿರುವ ಮಳೆಗೆ ಮುಂಬೈ ನಗರ ಅಕ್ಷರಶಃ ಮುಳುಗಿ ಹೋಗಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಮಳೆಯಿಂದ ಅತಿಯಾದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಲೋಕಲ್ ಟ್ರೇನ್ ಸಂಚಾರವನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
   

ಇದರ ಜೊತೆಗೆ ಮುಂದಿನ 24 ಗಂಟೆಗಳಲ್ಲಿ ಮುಬೈನಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ನಿವಾಸಿಗಳಿಗೆ ಮನೆಯಿಂದ ಹೊರ ಬರದಂತೆ ಸೂಚನೆ ನೀಡಲಾಗಿದೆ. ತೀರಾ ಅವಶ್ಯಕತೆ ಬಿದ್ದಲ್ಲಿ ಮಾತ್ರ ಮನೆಯಿಂದ ಹೊರಹೋಗುವಂತೆ ಸೂಚಿಸಲಾಗಿದೆ. ಭಾರೀ ಮಳೆಯಿಂದಾಗಿ ಹಲವು ವಿಮಾನಗಳ ಹಾರಾಟ ಸಹ ಸ್ಥಗಿತಗೊಳಿಸಲಾಗಿದೆ.

ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ ಪರಿಸ್ಥಿತಿ ಎದುರಿಸಲು ಎಲ್ಲ ರೀತಿಯ ತಯಾರಿ ಮಾಡಿಕೊಂಡಿರುವುದಾಗಿ ಮುಂಬೈ ಮಹಾನಗರ ಪಾಲಿಕೆ ತಿಳಿಸಿದೆ. ಭಾರೀ ಮಳೆಯಿಂದಾಗಿ ದಾದರ್, ಮುಂಬೈ ಸೆಂಟ್ರಲ್, ಕುರ್ಲಾ, ಅಂಧೇರಿ, ಸಾಕಿನಕ ಪ್ರದೇಶಗಳು ನೀರಿನಿಂದ ಆವೃತ್ತವಾಗಿವೆ. ಬೆಳಗ್ಗೆ 8ರಿಂದ ಮಧ್ಯಾಹ್ನ 3ಗಂಟೆವರೆಗೆ ಅತಿ ಹೆಚ್ಚು ಮಳೆ ಸುರಿದಿರುವುದು ಮುಂಬೈ ಮಹಾನಗರ ಪಾಲಿಕೆಯ ಮೂರು ಹವಾಮಾನ ಕೇಂದ್ರಗಳಲ್ಲಿ ದಾಖಲಾಗಿದೆ. ಮುಂಬೈ ನಗರದಲ್ಲಿ 30.92 ಮಿ.ಮೀ ಮಳೆ ದಾಖಲಾಗಿದ್ದು, ಪೂರ್ವ ಮತ್ತು ಪಶ್ಚಿಮ ಸಬರ್ಬನ್`ನಲ್ಲಿ 15.56 ಮಿ.ಮೀ ಮತ್ತು 12.42 ಮಿ/ಮೀ ಮಳೆ ದಾಖಲಾಗಿದೆ. ಭಾರೀ ಮಳೆ ಹೊರತಾಗಿಯೂ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲೇ ಆರ್ ಎಸ್ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್

ದಂತ ಕಳೆದುಕೊಂಡು ನೋವಿನಲ್ಲಿ ನರಳಾಡಿದ ಭೀಮನ ಸ್ಥಿತಿ ಈಗ ಹೇಗಿದೆ ಗೊತ್ತಾ

ಸಹಾಯ ಕೇಳಲು ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ಬಿಎಸ್‌ವೈಗೆ ಬಿಗ್‌ ಶಾಕ್‌

ಕಾಂಗ್ರೆಸ್ಸಿನವರಿಗೆ ಜನ ಸತ್ತಿದ್ದಕ್ಕೆ ಸಂಕಟವಿಲ್ಲ: ಸಿಟಿ ರವಿ

ಎಲ್ಲ ಜಮ್ಮು ಕಾಶ್ಮೀರಿ ಪ್ರಜೆಗಳು ಭಯೋತ್ಪಾದಕರಲ್ಲ: ಸಿಎಂ ಓಮರ್ ಅಬ್ದುಲ್ಲಾ

ಮುಂದಿನ ಸುದ್ದಿ
Show comments