Webdunia - Bharat's app for daily news and videos

Install App

ಭಾರೀ ಮಳೆ : ಕೇದಾರನಾಥ ಯಾತ್ರೆ ರದ್ದು

Webdunia
ಬುಧವಾರ, 12 ಜುಲೈ 2023 (07:03 IST)
ಡೆಹ್ರಾಡೂನ್: ಭಾರೀ ಮಳೆ ಸುರಿಯುತ್ತಿರುವ ಕಾರಣ ಉತ್ತರಾಖಂಡದ ಸೋನ್ಪ್ರಯಾಗ ಮತ್ತು ಗೌರಿಕುಂಡ್ನಲ್ಲಿ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೋನ್ಪ್ರಯಾಗ್ ಮತ್ತು ಗೌರಿಕುಂಡ್ನಲ್ಲಿ ಪ್ರತಿಕೂಲ ಹವಾಮಾನ ಇರುವ ಕಾರಣ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ. ಭಾರೀ ಮಳೆಯ ಪರಿಣಾಮ 4 ರಾಜ್ಯ ರಸ್ತೆ ಮತ್ತು 10 ಸಂಪರ್ಕ ರಸ್ತೆಗಳು ಮುಚ್ಚಿವೆ. ಅಲ್ಲದೇ ಧಾರಾಕಾರ ಮಳೆಯ ಪರಿಣಾಮ ಮಂದಾಕಿನಿ ಮತ್ತು ಅಲಕಾನಂದ ನದಿಗಳು ಉಕ್ಕಿ ಹರಿಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಭಾರೀ ಮಳೆ ಸುರಿಯುತ್ತಿರುವ ಕಾರಣ ಭಾರತೀಯ ಹವಾಮಾನ ಇಲಾಖೆ ಉತ್ತರಾಖಂಡದಲ್ಲಿ ಜುಲೈ 12ರಂದು ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೇ ಈ ಕುರಿತು ಟ್ವಿಟ್ಟರ್ನಲ್ಲಿ ಟ್ವೀಟ್ ಕೂಡಾ ಮಾಡಿದೆ. ಮಂಗಳವಾರ ಉತ್ತರಾಖಂಡದ ಗಂಗ್ನಾನಿ ಬಳಿಯ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಶೇಷಗಳು ಬಿದ್ದು ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಶಾಲೆ, ಆಸ್ಪತ್ರೆ ಗುರಿಯಾಗಿಸಿ ನಡೆಸಿದ ಪಾಕ್‌ ಮಿಸೈಲ್‌ ದಾಳಿಗೆ ತಕ್ಕ ಉತ್ತರ

ಪಾಕಿಸ್ತಾನದ ಸೇನಾ ಪಡೆಯ ಗುಂಡಿನ ದಾಳಿಗೆ ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು, ಹಲವರಿಗೆ ಗಾಯ

Operation Sindoor: ಪಾಕಿಸ್ತಾನದ ಮಿಲಿಟರಿ ಪೋಸ್ಟ್‌, ಡ್ರೋನ್ ಲಾಂಚ್‌ಪ್ಯಾಡ್‌ ಉಡೀಸ್‌

Operation Sindoor: ಭಾರತ ಏಟಿಗೆ ಪಾಕ್‌ ತತ್ತರ - ಇಸ್ಲಾಮಾಬಾದ್‌ನಲ್ಲಿ ಪೆಟ್ರೋಲ್ ಪಂಪ್‌ಗಳು ಬಂದ್‌

Operation Sindoor, ವಿಶ್ವ ಭೂಪಟದಲ್ಲೇ ಪಾಕಿಗಳು ಇಲ್ಲದಂತೆ ಆಗಬೇಕು: ಕಂಗನಾ ರನೌತ್‌

ಮುಂದಿನ ಸುದ್ದಿ
Show comments