Select Your Language

Notifications

webdunia
webdunia
webdunia
webdunia

ಪರಿಶೀಲನೆ ವೇಳೆ ಭಾರೀ ಟ್ರಾಫಿಕ್ !

ಪರಿಶೀಲನೆ ವೇಳೆ ಭಾರೀ ಟ್ರಾಫಿಕ್ !
ನವದೆಹಲಿ , ಸೋಮವಾರ, 20 ಜೂನ್ 2022 (14:34 IST)
ನವದೆಹಲಿ : ಕೇಂದ್ರದ ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಬುಧವಾರದಿಂದ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.
 
ಸೋಮವಾರ ಯೋಜನೆ ವಿರುದ್ಧ ಕೆಲವು ಸಂಘಟನೆಗಳು ಭಾರತ್ ಬಂದ್ಗೆ ಕರೆ ನೀಡಿದ್ದು, ದೆಹಲಿ-ಗುರುಗ್ರಾಮ ಎಕ್ಸ್ಪ್ರೆಸ್ಸ್ ವೇ ನಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

ಅಗ್ನಿಪಥ್ ಯೋಜನೆಯನ್ನು ಕೇಂದ್ರ ರದ್ದು ಮಾಡುವಂತೆ ಹಲವು ಸಂಘಟನೆಗಳು ಒತ್ತಾಯಿಸಿ ಬಂದ್ಗೆ ಕರೆ ನೀಡಿದ್ದು, ಈ ಹಿನ್ನೆಲೆ ಶಾಂತಿಯನ್ನು ಕಾಪಾಡಲು ಪೊಲೀಸರು ಸರ್ಹೌಲ್ ಗಡಿ ಸಮೀಪ ಎಕ್ಸ್ಪ್ರೆಸ್ ವೇನಲ್ಲಿ ವಾಹನ ತಪಾಸಣೆ ಕೈಗೊಂಡಿದ್ದಾರೆ. ಈ ಕಾರಣ ಒಂದೇ ಕಡೆ ಭಾರೀ ವಾಹನಗಳ ರಾಶಿ ಕಂಡುಬಂದಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.

ಇಂದು ದೆಹಲಿಯ ಜಂತರ್ ಮಂತರ್ನಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಸೇರಿದಂತೆ ವಿರೋಧ ಪಕ್ಷಗಳು ಪ್ರತಿಭಟನೆಯನ್ನು ಆಯೋಜಿಸಿವೆ. 


Share this Story:

Follow Webdunia kannada

ಮುಂದಿನ ಸುದ್ದಿ

16ನೇ ವಯಸ್ಸಿನಲ್ಲಿ ಮದುವೆಯಾಗಬಹುದು : ಹೈಕೋರ್ಟ್