Webdunia - Bharat's app for daily news and videos

Install App

ಬದ್ರಿನಾಥ್ ನಲ್ಲಿ ಹೆಲಿಕಾಪ್ಟರ್ ಪತನ: ಇಂಜಿನಿಯರ್ ಸಾವು

Webdunia
ಶನಿವಾರ, 10 ಜೂನ್ 2017 (15:21 IST)
ಬದ್ರಿನಾಥ್: ಯಾತ್ರಾಸ್ಥಳ ಬದ್ರಿನಾಥ್ ನಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಹೆಲಿಕಾಪ್ಟರ್ ಪತನವಾಗಿದ್ದು, ಘಟನೆಯಲ್ಲಿ ಓರ್ವ ಇಂಜಿನಿಯರ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
 
ಚಾಪರ್ ನಲ್ಲಿ ಒಟ್ಟು 8 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.  ಇದರಲ್ಲಿ ಐವರು ಪ್ರಯಾಣಿಕರು, ಇಬ್ಬರು ಪೈಲಟ್‌ ಗಳು ಹಾಗೂ ಓರ್ವ ಇಂಜಿನಿಯರ್ ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪೈಕಿ ಹೆಲಿಕಾಪ್ಟರ್‌ನ ಇಂಜಿನಿಯರ್ ಮೃತಪಟ್ಟರೆ, ಇಬ್ಬರು ಪೈಲಟ್‌ ಗಳು ಸಣ್ಣಪುಟ್ಟ  ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತ ಇಂಜಿನಿಯರ್‌ ನನ್ನು ಅಸ್ಸಾಂನ ವಿಕ್ರಮ್ ಲಾಂಬಾ ಎಂದು ಗುರುತಿಸಲಾಗಿದೆ.
 
ಸೇನಾ ಮೂಲಗಳ ಪ್ರಕಾರ ಪತನವಾದ ಚಾಪರ್ ಕ್ರೆಸ್ಟಾಲ್ ಏವಿಯೇಷನ್‌ ಗೆ ಸೇರಿದ್ದು, ಆಗಸ್ಟಾ 119 ಸರಣಿಯ ಹೆಲಿಕಾಪ್ಟರ್ ಆಗಿದೆ ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್ ಬಿದ್ದ ರಭಸಕ್ಕೆ ಚಾಪರ್ ನ ರೆಕ್ಕೆಗಳು ತುಂಡರಿಸಿದ್ದು, ಕಾಪ್ಟರ್ ಪ್ರಮುಖ ಭಾಗಗಳು ಜಖಂಗೊಂಡಿವೆ. ಇನ್ನು ಐವರು ಪ್ರಯಾಣಿಕರು ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಚೀನಾ ಭೇಟಿ ಅಮೆರಿಕಾ ಹೊಟ್ಟೆ ಉರಿಸೋದು ಗ್ಯಾರಂಟಿ

ಅನ್ಯಧರ್ಮೀಯರ ಮನೆಯಲ್ಲೂ ಚಾಮುಂಡಿ ತಾಯಿ ಫೋಟೋ ಹಾಕ್ಸಿ: ಡಿಕೆ ಶಿವಕುಮಾರ್ ಗೆ ನೆಟ್ಟಿಗರ ಸವಾಲ್

Karnataka Weather: ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿರಲಿದೆ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments