Webdunia - Bharat's app for daily news and videos

Install App

ಹೆಲಿಕಾಪ್ಟರ್ ತುಮ್ಹಾರೆ ಬಾಪ್ ಕಾ ಹೈ: ಅಖಿಲೇಶ್ ಬೆಂಬಲಿಗರಿಗೆ ಶಿವಪಾಲ್ ಪ್ರತಿಕ್ರಿಯೆ

Webdunia
ಸೋಮವಾರ, 24 ಅಕ್ಟೋಬರ್ 2016 (19:21 IST)
ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಬಿಕ್ಕಟ್ಟು ಅಂತ್ಯಗೊಳ್ಳುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇಂದು ಪಕ್ಷದ ವೇದಿಕೆಯಲ್ಲಿಯೇ ಸಮಾಜವಾದಿ ಪಕ್ಷದ ಮುಖಂಡ ಶಿವಪಾಲ್ ಯಾದವ್ ಮತ್ತು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮಧ್ಯೆ ಬಹಿರಂಗ ವಾಗ್ವಾದ ನಡೆಯಿತು.
 
ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ. ಪ್ರತಿಯೊಂದು ಜಿಲ್ಲೆಗೂ ಮೂರರಿಂದ ನಾಲ್ಕು ಬಾರಿ ಭೇಟಿ ನೀಡಿದ್ದೇನೆ  ಎಂದು ಶಿವಪಾಲ್ ಹೇಳಿದಾಗ, ಸರಕಾರಿ ಹೆಲಿಕಾಪ್ಟರ್‌ ಬಳಸಿಕೊಂಡು ಪ್ರಯಾಣಿಸಿದ್ದೀರಾ ಎನ್ನುವ ಪ್ರತಿಕ್ರಿಯೆ ಸಭಿಕರಿಂದ ಕೇಳಿ ಬಂತು.
 
ಇದರಿಂದ ಆಕ್ರೋಶಗೊಂಡ ಶಿವಪಾಲ್, ಹೆಲಿಕಾಪ್ಟರ್ ತುಮ್ಹಾರೆ ಬಾಪ್ ಕಾ ಹೈ, ಸರಕಾರ ಮೇ ಮೈ ಮಂತ್ರಿ ಥಾ( ಹೆಲಿಕಾಪ್ಟರ್ ನಿಮ್ಮಪ್ಪಂದಾ, ಸರಕಾರದಲ್ಲಿ ಸಚಿವನಾಗಿದ್ದರಿಂದ ಹೆಲಿಕಾಪ್ಟರ್ ಬಳಸಿದ್ದೇನೆ ಎಂದು ತಿರುಗೇಟು ನೀಡಿದರು.
 
ಮುಖ್ಯಮಂತ್ರಿ ಬಳಿಯಿದ್ದ ಮೈಕ್ ಕಿತ್ತುಕೊಂಡ ಶಿವಪಾಲ್ ಯಾದವ್, ಕಠಿಣ ಪರಿಶ್ರಮದಿಂದ ಮತ್ತು ಮುಲಾಯಂ ಸಿಂಗ್ ಅವರ ನಾಯಕತ್ವದಿಂದ ಪಕ್ಷವನ್ನು ಕಟ್ಟಿದ್ದೇವೆಯೇ ಹೊರತು ನಿಮ್ಮ ಘೋಷಣೆಗಳಿಂದಲ್ಲ ಎಂದು ಅಖಿಲೇಶ್ ಬೆಂಬಲಿಗರಿಗೆ ತಿರುಗೇಟು ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಗಂದೂರು ಸೇತುವೆ ಜಾಗ ಏನು ಇವರ ಅಪ್ಪಂದಾ, ಅಧಿಕಾರಿಗಳನ್ನೂ ಸಸ್ಪೆಂಡ್ ಮಾಡ್ಬೇಕು: ಬೇಳೂರು ಗೋಪಾಲಕೃಷ್ಣ

ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆಯೇ ಗ್ಯಾರಂಟಿಯಿಲ್ಲ: ಆರ್ ಅಶೋಕ್

ಸಿಗಂದೂರು ಸೇತುವೆ ಉದ್ಘಾಟನೆಗೆ ಕರೆದಿಲ್ಲ: ಮೋದಿಗೆ ಸಿದ್ದರಾಮಯ್ಯ ಬರೆದ ಪತ್ರದಲ್ಲಿ ಏನಿದೆ

ನೀವು ನಂ1 ಮಿನಿಸ್ಟರ್ ಅಂತ ಸುರ್ಜೇವಾಲ ನನ್ನ ಹೊಗಳಿದ್ದಾರೆ: ಜಮೀರ್ ಅಹ್ಮದ್

Gold price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments