Publish Date: Sat, 25 Jul 2026 (18:50 IST)
Updated Date: Sat, 25 Jul 2026 (18:52 IST)
NEET-UG ಪರೀಕ್ಷೆಗೆ ಸಂಬಂಧಿಸಿದ ವಿವಾದದ ನಡುವೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ (ಜುಲೈ 25) ರಾಜೀನಾಮೆ ನೀಡಿದರು. ಅವರ ನಿರ್ಗಮನದೊಂದಿಗೆ, ಮುಂದಿನ ಶಿಕ್ಷಣ ಸಚಿವರಾಗಿ ಯಾರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬ ಚರ್ಚೆ ಶುರುವಾಗಿದೆ.
ಕೇಂದ್ರ ಸರ್ಕಾರವು ಪ್ರಧಾನ್ ಅವರ ಉತ್ತರಾಧಿಕಾರಿಯನ್ನು ಇನ್ನೂ ಘೋಷಿಸಿಲ್ಲ; ಹಾಗೆಯೇ ಪ್ರಧಾನ ಮಂತ್ರಿಗಳ ಕಚೇರಿ ಅಥವಾ ರಾಷ್ಟ್ರಪತಿ ಭವನದಿಂದ ಮುಂದಿನ ಶಿಕ್ಷಣ ಸಚಿವರ ಹೆಸರನ್ನು ಪ್ರಕಟಿಸುವ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ.
ಆದಾಗ್ಯೂ, ಮಾಧ್ಯಮ ವರದಿಗಳು, ರಾಜಕೀಯ ಚರ್ಚೆಗಳು ಮತ್ತು ಆನ್ಲೈನ್ ಊಹಾಪೋಹಗಳಲ್ಲಿ ಕೆಲವು ರಾಜಕೀಯ ಹೆಸರುಗಳು ಹರಿದಾಡುತ್ತಿದೆ.
ಜಯಂತ್ ಚೌಧರಿ: ಅವರು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ರಾಜ್ಯ ಸಚಿವರಾಗಿ (ಸ್ವತಂತ್ರ ಉಸ್ತುವಾರಿ) ಹಾಗೂ ಶಿಕ್ಷಣ ಇಲಾಖೆಯ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ರಾಷ್ಟ್ರೀಯ ಲೋಕ ದಳದ (RLD) ಅಧ್ಯಕ್ಷರಾಗಿದ್ದು, 2024ರ ಲೋಕಸಭಾ ಚುನಾವಣೆಗೆ ಮುನ್ನ ಎನ್ಡಿಎ (NDA) ಮೈತ್ರಿಕೂಟವನ್ನು ಸೇರಿಕೊಂಡರು.
ಅವರು ಈಗಾಗಲೇ ಶಿಕ್ಷಣ ಸಚಿವಾಲಯದಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವುದರಿಂದ, ಒಂದು ವೇಳೆ ಕೇಂದ್ರ ಸರ್ಕಾರವು ಮಧ್ಯಂತರ ಸಚಿವರನ್ನು ನೇಮಿಸಲು ನಿರ್ಧರಿಸಿದರೆ, ಅವರು ಸಹಜ ಆಯ್ಕೆಯಾಗಬಹುದು ಎಂದು ಹಲವು ವರದಿಗಳು ಸೂಚಿಸಿವೆ. ಆದಾಗ್ಯೂ, ಸರ್ಕಾರವು ಈ ವರದಿಗಳ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಸುಕಾಂತ ಮಜುಂದಾರ್: ಸುಕಾಂತ ಮಜುಂದಾರ್ ಅವರು ಶಿಕ್ಷಣ ಹಾಗೂ ಈಶಾನ್ಯ ವಲಯದ ಅಭಿವೃದ್ಧಿ ಖಾತೆಯ ರಾಜ್ಯ ಸಚಿವರಾಗಿದ್ದಾರೆ. ಪಶ್ಚಿಮ ಬಂಗಾಳದ ಬಿಜೆಪಿ ಸಂಸದರಾಗಿರುವ ಮತ್ತು ಪಕ್ಷದ ಮಾಜಿ ರಾಜ್ಯ ಅಧ್ಯಕ್ಷರಾಗಿರುವ ಇವರು, ಮೋದಿ ಸರ್ಕಾರದ ಮೂರನೇ ಅವಧಿ ಆರಂಭವಾದಾಗಿನಿಂದ ಶಿಕ್ಷಣ ಸಚಿವಾಲಯದ ಭಾಗವಾಗಿದ್ದಾರೆ. ಇವರ ಹೆಸರು ಕೂಡಾ ಮುನ್ನೆಲೆಗಳಿದೆ.
ಶ್ರೀಕಾಂತ್ ಶಿಂಧೆ
ಶ್ರೀಕಾಂತ್ ಶಿಂಧೆ ಅವರು ಮಹಾರಾಷ್ಟ್ರದ ಕಲ್ಯಾಣ್ ಕ್ಷೇತ್ರದಿಂದ ಆಯ್ಕೆಯಾದ ಲೋಕಸಭಾ ಸಂಸದರಾಗಿದ್ದು, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರರಾಗಿದ್ದಾರೆ. ವೃತ್ತಿಯಲ್ಲಿ ವೈದ್ಯರಾಗಿರುವ ಇವರು, 2014ರಿಂದ ಸಂಸತ್ತಿನಲ್ಲಿ ಕಲ್ಯಾಣ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಸಂಪುಟ ವಿಸ್ತರಣೆಯ ಭಾಗವಾಗಿ ಶ್ರೀಕಾಂತ್ ಶಿಂಧೆ ಅವರನ್ನು ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯಿದೆ ಮತ್ತು ಅವರಿಗೆ ಶಿಕ್ಷಣ ಸಚಿವಾಲಯದ ಜವಾಬ್ದಾರಿಯನ್ನು ನೀಡುವ ಬಗ್ಗೆಯೂ ಪರಿಗಣಿಸಲಾಗುತ್ತಿದೆ. ಆದರೆ, ಸರ್ಕಾರವು ಈ ವರದಿಯನ್ನು ಇನ್ನೂ ದೃಢಪಡಿಸಿಲ್ಲ.
ದೇವೇಂದ್ರ ಫಡ್ನವೀಸ್
ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಬಿಜೆಪಿಯ ಅತ್ಯಂತ ಹಿರಿಯ ನಾಯಕರಲ್ಲಿ ಒಬ್ಬರು. ಅವರು ಈ ಹಿಂದೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಪಕ್ಷದ ಪ್ರಮುಖ ತಂತ್ರಗಾರರೆಂದು ಪರಿಗಣಿಸಲ್ಪಟ್ಟಿದ್ದಾರೆ.
ರಾಘವ್ ಚಡ್ಡಾ
ರಾಘವ್ ಚಡ್ಡಾ ಅವರು ರಾಜ್ಯಸಭಾ ಸಂಸದರಾಗಿದ್ದು, ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದಾರೆ. ಅವರು ಈ ಹಿಂದೆ ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು 2022 ರಿಂದ ಮೇಲ್ಮನೆಯಲ್ಲಿ ಪಂಜಾಬ್ ಅನ್ನು ಪ್ರತಿನಿಧಿಸುತ್ತಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ