Webdunia - Bharat's app for daily news and videos

Install App

ದೆಹಲಿಯಲ್ಲಿ ಹೆಚ್ಚಿನ ವಾಯುಮಾಲಿನ್ಯ: ವರ್ಚುವಲ್ ವಿಚಾರಣೆಗೆ ಸಿಜೆಐ ಸಂಜೀವ್ ಖನ್ನಾ ಸೂಚನೆ

Sampriya
ಮಂಗಳವಾರ, 19 ನವೆಂಬರ್ 2024 (14:22 IST)
ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಸಾಧ್ಯವಿರುವ ಎಲ್ಲ ಕಡೆ ವರ್ಚುವಲ್ ಕೋರ್ಟ್ ವಿಚಾರಣೆಗೆ ಅವಕಾಶ ನೀಡುವಂತೆ ಎಲ್ಲ ನ್ಯಾಯಾಧೀಶರಿಗೂ ಸೂಚಿಸಲಾಗಿದೆ.

ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (ಎಸ್‌ಸಿಬಿಎ) ಅಧ್ಯಕ್ಷ ಕಪಿಲ್ ಸಿಬಲ್ ಸೇರಿದಂತೆ ವಕೀಲರು ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ವಾಯು ಗುಣಮಟ್ಟ ಹದಗೆಡುತ್ತಿರುವ ಕುರಿತು ಪ್ರಸ್ತಾಪಿಸಿ ತಕ್ಷಣದ ಕ್ರಮಗಳನ್ನು ಸೂಚಿಸುವಂತೆ ಕೋರಿದರು. 'ಮಾಲಿನ್ಯ ನಿಯಂತ್ರಣ ಮಿತಿ ಮೀರಿದೆ' ಎಂದೂ ಕಪಿಲ್ ಸಿಬಲ್ ತಿಳಿಸಿದರು.

ಈ ವೇಳೆ 'ಸಾಧ್ಯವಿರುವ ಎಲ್ಲ ಕಡೆ ವರ್ಚುವಲ್ ವಿಚಾರಣೆಗೆ ಅನುಮತಿಸಲು ಸೂಚಿಸಿದ್ದೇವೆ' ಎಂದು  ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಮಂಗಳವಾರ ತಿಳಿಸಿದ್ದಾರೆ.

ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕವು (ಎಕ್ಯೂಐ) ಮಂಗಳವಾರ ಬೆಳಿಗ್ಗೆ 8ಕ್ಕೆ 484 ಅಂಶದಷ್ಟಿತ್ತು. ಇದು ಈ ಋತುವಿನ ಅತ್ಯಂತ ಕೆಟ್ಟ ಮಟ್ಟದಲ್ಲಿದೆ. ಕೆಲವು ಪ್ರದೇಶಗಳಲ್ಲಿ 500 ಅಂಶಗಳ ಗಡಿಯನ್ನು ಮೀರಿದೆ.

ದೆಹಲಿಯ ವಾಯು ಗುಣಮಟ್ಟ ತೀವ್ರ ಕುಸಿತ ಕಂಡಿದ್ದರೂ ಜಿಆರ್‌ಎಪಿ 4ರ ಅಡಿಯಲ್ಲಿ ಕಠಿಣವಾದ ಕ್ರಮಗಳನ್ನು ಜಾರಿಗೊಳಿಸುವಲ್ಲಿ ವಿಳಂಬ ಏಕಾಯಿತು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಪ್ರೆಗ್ನೆನ್ಸಿಗೆ ಟ್ರೈ ಮಾಡುತ್ತಿದ್ದರೆ ಮಹಿಳೆಯರು ಇದನ್ನು ಗಮನಿಸಬೇಕು ಅಂತಾರೆ ಡಾ ಪದ್ಮಿನಿ ಪ್ರಸಾದ್

ಅಂದು ಮುಖ್ಯಮಂತ್ರಿ ಆಗುವ ಆಸೆ ಈಡೇರಲಿಲ್ಲ ಎಂದು ಈಗ ಈಡೇರಿಸಿಕೊಳ್ತಾರಾ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments