Select Your Language

Notifications

webdunia
webdunia
webdunia
webdunia

ಗಣರಾಜ್ಯೋತ್ಸವ ಹಿನ್ನೆಲೆ: ದೆಹಲಿಯಲ್ಲಿ ಬಿಗಿ ಭದ್ರತೆ

ಗಣರಾಜ್ಯೋತ್ಸವ ಹಿನ್ನೆಲೆ: ದೆಹಲಿಯಲ್ಲಿ ಬಿಗಿ ಭದ್ರತೆ
ನವದೆಹಲಿ , ಸೋಮವಾರ, 25 ಜನವರಿ 2016 (15:09 IST)
ಗಣರಾಜ್ಯೋತ್ಸವಕ್ಕೆ ಒಂದು ದಿನ ಬಾಕಿ ಇದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಇಂಡಿಯಾ ಗೇಟ್ ಸುತ್ತಮುತ್ತಲೂ ಭದ್ರತಾ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾರೆ. 

 
ಶಂಕಿತ ಉಗ್ರರ ಬಂಧನ ಮತ್ತು  ಭಯೋತ್ಪಾದಕ ಗುಂಪುಗಳಿಂದ ದಾಳಿ ಬೆದರಿಕೆ ಇರುವ ಕುರಿತು ಗುಪ್ತಚರ ದಳಗಳು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. 40,000ಕ್ಕೂ ಹೆಚ್ಚು ಭದ್ರತಾಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. 
 
ಐಸಿಸ್‌ ಸಂಘಟನೆ ಜತೆ ನಂಟು ಹೊಂದಿದ ಆರೋಪದಡಿ ಬಂಧಿತರಾಗಿರುವ ಶಂಕಿತ ಆರು ಮಂದಿ ಐಸಿಸ್‌ ಉಗ್ರರನ್ನು ಹೆಚ್ಚಿನ ತನಿಖೆಗಾಗಿ ದೆಹಲಿಗೆ ಕರೆದೊಯ್ಯಲಾಗಿದೆ.
 
ಭಾನುವಾರ ಎಲ್ಲ ಶಂಕಿತ ಉಗ್ರರ ಭಾವಚಿತ್ರಗಳನ್ನು ಬಿಡುಗಡೆ ಮಾಡಿರುವ ಪೊಲೀಸರು ಎಲ್ಲ ರೈಲು ನಿಲ್ದಾಣಗಳಲ್ಲಿ ಮತ್ತು ಮೆಟ್ರೋ, ಅಂತರರಾಜ್ಯ ಬಸ್ ನಿಲ್ದಾಣಗಳಲ್ಲಿ ಅವನ್ನು ಲಗತ್ತಿಸಿ ಎಚ್ಚರಿಕೆ ಕಾಯ್ದುಕೊಳ್ಳಬೇಕಾಗಿ ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. 
 
40,000ಕ್ಕೂ ಹೆಚ್ಚು ದೆಹಲಿ ಪೊಲೀಸ್ ಮತ್ತು ಅರೆಸೇನಾ ಪಡೆ ಸಿಬ್ಬಂದಿ  ನವದೆಹಲಿಯಾದ್ಯಂತ ನಿಯೋಜನೆಗೊಂಡಿದ್ದು, ವಿಶೇಷವಾಗಿ ಮೆಟ್ರೋ ನಿಲ್ದಾಣಗಳು, ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. 
 
ಪ್ರಧಾನಿ ಮೋದಿ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಜತೆಯಲ್ಲಿ ಮುಖ್ಯ ಅತಿಥಿ ಫ್ರಾನ್ಸ್​ನ ಅಧ್ಯಕ್ಷ ಫ್ರಾನ್ಸಿಸ್ ಹೊಲಾಂಡೆ ನಾಳೆ ಇಂಡಿಯಾ ಗೇಟ್ ಬಳಿ ನಡೆಯಲಿರುವ  ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಭಾರಿ ಭದ್ರತೆಯನ್ನು ಒದಗಿಸಲಾಗಿದೆ.
 
ಹೊಲಾಂಡೆ ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವ ಫ್ರಾನ್ಸ್‌ನ ಐದನೇ ಅಧ್ಯಕ್ಷರಾಗಿದ್ದಾರೆ. 

Share this Story:

Follow Webdunia kannada