Publish Date: Wed, 17 May 2023 (08:19 IST)
Updated Date: Wed, 17 May 2023 (10:22 IST)
ನವದೆಹಲಿ : ಚುನಾವಣೆಯ ಸಮಯದಲ್ಲಿ ಮತದಾರರಿಗೆ ʼಗ್ಯಾರಂಟಿ ಯೋಜನೆʼಯ ಭರವಸೆ ನೀಡಿದ್ದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಈಗ ʼಗ್ಯಾರಂಟಿ ಸಿಎಂʼ ಹುದ್ದೆ ನೀಡುವಂತೆ ಹೈಕಮಾಂಡ್ ಮುಂದೆ ಪಟ್ಟು ಹಿಡಿದಿದ್ದಾರೆ.
ಹೈಕಮಾಂಡ್ ಇಬ್ಬರನ್ನೂ ಸಮಾಧಾನ ಪಡಿಸಲು ತಂತ್ರಗಳನ್ನು ಹೆಣೆಯುತ್ತಿದ್ದರೂ ಇಬ್ಬರೂ ಮೊದಲ ಅವಧಿಗೆ ನನ್ನನ್ನೇ ಸಿಎಂ ಮಾಡಬೇಕೆಂಬ ಜಿದ್ದಿಗೆ ಬಿದ್ದಿದ್ದಾರೆ. ವಿವಿಧ ಭಾಗ್ಯಗಳನ್ನು ನೀಡಿದ್ದ ಕಾಂಗ್ರೆಸ್ ಈಗ ಯಾರಿಗೆ ʼಗ್ಯಾರಂಟಿ ಸಿಎಂʼ ಭಾಗ್ಯ ನೀಡುತ್ತದೆ ಎನ್ನುವುದೇ ಸದ್ಯದ ಕುತೂಹಲ.