Webdunia - Bharat's app for daily news and videos

Install App

ಶ್ರೀರಾಮನ ಫೋಟೋ ಇರುವ ಪ್ಲೇಟ್ ನಲ್ಲಿ ಚಿಕನ್ ಬಿರಿಯಾನಿ ವಿತರಣೆ: ಹಿಂದೂಗಳ ಆಕ್ರೋಶ

Krishnaveni K
ಬುಧವಾರ, 24 ಏಪ್ರಿಲ್ 2024 (08:59 IST)
ನವದೆಹಲಿ: ಹಿಂದೂಗಳ ಆರಾಧ‍್ಯ ದೈವ ಪ್ರಭು ಶ್ರೀರಾಮಚಂದ್ರನ್ ಫೋಟೋ ಇರುವ ಪೇಪರ್ ಪ್ಲೇಟ್ ನಲ್ಲಿ ಚಿಕನ್ ಬಿರಿಯಾನಿ ವಿತರಿಸಿದ ವಿಚಾರ ಈಗ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಇತ್ತೀಚೆಗೆ ದೆಹಲಿಯ ಜಹಾಂಗೀರ್ ಪುರಿಯಲ್ಲಿ ಘಟನೆ ನಡೆದಿದೆ.

ವರ್ತಕರೊಬ್ಬರು ಶ್ರೀರಾಮನ ಫೋಟೋ ಇರುವ ಪ್ಲೇಟ್ ಗಳಲ್ಲಿ ಚಿಕನ್ ಬಿರಿಯಾನಿ ವಿತರಿಸಿದ್ದಾರೆ. ಬಳಸಿ ಬಿಸಾಡುವ ಇಂತಹ ಹಲವು ಪ್ಲೇಟ್ ಗಳನ್ನು ಕಸದ ಬುಟ್ಟಿಯಲ್ಲಿ ಗಮನಿಸಿದ ಸ್ಥಳೀಯರು ಅಂಗಡಿ ಮಾಲಿಕನನ್ನು ಪ್ರಶ್ನೆ ಮಾಡಿದ್ದಾರೆ. ಘಟನೆ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ.

ಈ ಬಗ್ಗೆ ಹಿಂದೂ ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಬಿರಿಯಾನಿ ಅಂಗಡಿಯಲ್ಲಿ ಇಂತಹ ಹಲವು ಪ್ಲೇಟ್ ಗಳಿತ್ತು. ಕಸದ ಬುಟ್ಟಿಯಲ್ಲೂ ಬಳಸಿ ಬಿಸಾಡಲಾದ ಪ್ಲೇಟ್ ಗಳಿತ್ತು. ಈ ಬಗ್ಗೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಇಂತಹ ಪ್ಲೇಟ್ ಗಳ ಕಟ್ಟನ್ನು ಅಂಗಡಿಯಿಂದ ವಶಪಡಿಸಿಕೊಂಡಿದ್ದಾರೆ.

ಸೋಷಿಯಲ್ ಮೀಡಿಯಾಗಳಲ್ಲೂ ಈ ಬಗ್ಗೆ ಹಿಂದೂಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಪ್ಲೇಟ್ ಗಳಲ್ಲಿ ರಾಮನ ಫೋಟೋ ಹಾಕುವ ಅಗತ್ಯವೇನಿತ್ತು. ಅಂತಹ ಪ್ಲೇಟ್ ಗಳಲ್ಲಿ ಮಾಂಸಾಹಾರ ವಿತರಿಸಿ ಹಿಂದೂಗಳ ಭಾವನೆಗೆ ಧಕ್ಕೆ ತರುವುದು ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments