ಗೋವಾದಲ್ಲಿ ಮೇ 27 ರಿಂದ ಹಿಂದೂ ರಾಷ್ಟ್ರ ಅಧಿವೇಶನ

Webdunia
ಸೋಮವಾರ, 20 ಮೇ 2019 (14:38 IST)
ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಈ ವರ್ಷದ ಹಿಂದೂ ರಾಷ್ಟ್ರ ಅಧಿವೇಶನ ಗೋವಾದ ಪೋಂಡಾದಲ್ಲಿ ಏರ್ಪಡಿಸಲಾಗಿದೆ.

8 ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನವನ್ನು ಮೇ 27 ರಿಂದ ಜೂನ್ 8 ರವರೆಗೆ ಗೋವಾದ ಫೋಂಡಾದ ಶ್ರೀರಾಮನಾಥ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ಸಮನ್ವಯಕಕಾರ ಗುರುಪ್ರಸಾದಗೌಡ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಿಂದೂ ಜನಜಾಗೃತಿ ಸಮಿತಿ ಕಳೆದ 7 ಅಧಿವೇಶನದಲ್ಲಿ ಚರ್ಚಿಸಲಾದ ಹಿಂದೂರಾಷ್ಟ್ರ ಸ್ಥಾಪನೆ ಸಂಕಲ್ಪನೆಯ ವಿಷಯದ ಕುರಿತು ಈ ಬಾರಿಯ 8 ನೇ ಅಧಿವೇಶನದಲ್ಲಿ ದೊಡ್ಡ ಮಟ್ಟದಲ್ಲಿ ಜಾಗೃತಿ ಮೂಡಿಸಲಾಗುವುದು.‌

ಅಧಿವೇಶನಕ್ಕೆ ಬಾಂಗ್ಲಾದೇಶದ ಬಾಂಗ್ಲಾದೇಶ ಮೈನಾರಿಟಿ ವಾಚ್ ನ ಅಧ್ಯಕ್ಷ ಹಾಗೂ ನ್ಯಾಯವಾದಿ ರವೀಂದ್ರ ಘೋಷ, ಹಿಂದೂ ಫಾರ್ ಜಸ್ಟೀಸ್ ನ ಅಧ್ಯಕ್ಷ ಹಾಗೂ ರಾಮಮಂದಿರ ಆಂದೋಲನದ ಹಿರಿಯ ನ್ಯಾಯವಾದಿಗಳಾದ ಹರಿಶಂಕರ ಜೈನ್, ಶಬರಿಮಲೈ ದೇವಸ್ಥಾನದ ವಿಷಯದಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಿದ ನ್ಯಾಯವಾದಿ ಜೆ.ಸಾಯಿದೀಪಕ್, ವರ್ಲ್ಡ್ ಹಿಂದೂ ಫೆಡರೇಶನ್ ನ ಅಜಯಸಿಂಹ, ಕೇಂದ್ರ ಗೃಹಸಚಿವಾಲಯದ ಮಾಜಿ ಹಿರಿಯ ಅಧಿಕಾರಿ ಆರ್.ವಿ.ಎಸ್.ಮಣಿ, ಬಂಗಾಲದ ಖ್ಯಾತ ನ್ಯಾಯವಾದಿ ಜಾಯದೀಪ ಮುಖರ್ಜಿ ಸೇರಿದಂತೆ ಮುಂತಾದ ಗೌರವಾನ್ವಿತರು ಆಗಮಿಸಲಿದ್ದಾರೆ.

ಇದು ಅಷ್ಟೇ ಅಲ್ಲದೇ ೨೮ ರಾಜ್ಯಗಳು ಸಹಿತ ಬಾಂಗ್ಲಾದೇಶದಿಂದ ಹೀಗೆ 200 ಕ್ಕೂ ಅಧಿಕ ಹಿಂದೂ ಸಂಘಟನೆಗಳ 800 ಕ್ಕಿಂತ ಹೆಚ್ಚು ಹಿಂದೂತ್ವನಿಷ್ಠರು ಭಾಗಿಯಾಗಿ ಹಿಂದೂತ್ವದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮೂರು ದಿನ ವರುಣನ ಆರ್ಭಟ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ವಿಶ್ವವಿಖ್ಯಾತ ಜಂಬೂಸವಾರಿಗೆ ಮೈಸೂರು ಸಜ್ಜು: ಆರನೇ ಬಾರಿ ಅಂಬಾರಿ ಹೊರಲಿರುವ ಅಭಿಮನ್ಯು

ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಗೆ, ವಿಜಯ್ ಘಾಟ್‌ನಲ್ಲಿ ಶಾಸ್ತ್ರಿಗೆ ಗೌರವ ನಮನ ಸಲ್ಲಿಸಿದ ಮೋದಿ

ಗಾಯಕ ಜುಬೀನ್ ಗಾರ್ಗ್‌ 13ನೇ ದಿನದ ಕಾರ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ

RSSನ ಸಮಾನಾರ್ಥ ಪದವೇ ದೇಶಭಕ್ತಿ: ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments