Webdunia - Bharat's app for daily news and videos

Install App

ವಿಶ್ವದ ಎಲ್ಲ ಸಮಸ್ಯೆಗಳಿಗೆ ಹಿಂದೂ ಧರ್ಮದಲ್ಲಿ ಪರಿಹಾರವಿದೆ: ಅಮಿತ್

Webdunia
ಸೋಮವಾರ, 29 ಜೂನ್ 2015 (15:45 IST)
ವಿಶ್ವದ ಎಲ್ಲ ಸಮಸ್ಯೆಗಳಿಗೆ ಹಿಂದೂ ಧರ್ಮದಲ್ಲಿ ಪರಿಹಾರವಿದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅಭಿಪ್ರಾಯ ಪಟ್ಟಿದ್ದಾರೆ .

ಗುಜರಾತ್ ವಿಶ್ವವಿದ್ಯಾಲಯದಲ್ಲಿ ನಡೆದ, ಮಾಜಿ ರಾಷ್ಟ್ರಪತಿ ಕಲಾಂ ಅವರು ಬರೆದಿರುವ 'ಟ್ರಾನ್ಸೆಂಡೆನ್ಸ್: ಮೈ ಸ್ಪಿರಿಚ್ವಲ್ ಎಕ್ಸಪಿರಿಯೆನ್ಸ್ ವಿದ್ ಪ್ರಮುಖ್ ಸ್ವಾಮೀಜಿ' ಎಂಬ ಪುಸ್ತಕದ ಅನಾವರಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಶಾ, ಹಿಂದೂ ಧರ್ಮದಲ್ಲಿ ವಿಶ್ವ ಎದುರಿಸುತ್ತಿರುವ ಎಲ್ಲ ರೀತಿಯ ಸಮಸ್ಯೆಗಳಿಗೆ ಪರಿಹಾರವಿದೆ. ಈ ಧರ್ಮದಲ್ಲಿ ಹುಟ್ಟಿದ್ದೇನೆ ಎಂಬ ಕಾರಣಕ್ಕೆ ನಾನಿದನ್ನು ಹೇಳುತ್ತಿಲ್ಲ ಎಂದು ಹೇಳಿದರು. 
 
"ನಾನು ಎರಡು ವರ್ಷಗಳ ಕಾಲ ಸತತ ಸಮಸ್ಯೆಯ ಸುಳಿಯಲ್ಲಿ ಸಿಲುಕಿದಾಗ ಭಾರತದಲ್ಲಿರುವ ಎಲ್ಲ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದ್ದೆ. ಆ ಸಂದರ್ಭದಲ್ಲಿ ದೇಶದಲ್ಲಿರುವ ಎಲ್ಲ ಜ್ಯೋತಿರ್ಲಿಂಗಗಳು ಮತ್ತು ಶಕ್ತಿಪೀಠಗಳನ್ನು ಸಂದರ್ಶಿಸಿ ಆರ್ಶೀರ್ವಾದ ಪಡೆದಿದ್ದೆ. ಆದರೆ ಸೋಮನಾಥಕ್ಕೆ ಮಾತ್ರ ಭೇಟಿ ನೀಡಿರಲಿಲ್ಲ", ಎಂದು ಶಾ ಹೇಳಿದರು. ಸೊಹ್ರಾಬುದ್ದೀನ್ ಶೇಕ್ ಪ್ರಕರಣದ ಕಾನೂನು ವಿಚಾರಣೆ ವೇಳೆ ಗುಜರಾತ್ ಪ್ರವಾಸಕ್ಕೆ ತಮಗೆ ನಿರ್ಬಂಧ ಹೇರಿದ್ದನ್ನು ಉಲ್ಲೇಖಿಸಿ ಶಾ ಈ ಮಾತುಗಳನ್ನಾಡಿದ್ದಾರೆ. 
 
"ಆ ಕಠಿಣ ಸಂದರ್ಭದಲ್ಲಿ ನಾನು ನನ್ನ ಚಟುವಟಿಕೆಗಳನ್ನು ಮಾಡಲು ಕೂಡ ಶಕ್ತನಾಗಿರಲಿಲ್ಲ. ಆದರೆ ದೇವರ ಆಶೀರ್ವಾದದಿಂದ ನಾನು ಮೇಲೆದ್ದು ಬಂದೆ", ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments