Webdunia - Bharat's app for daily news and videos

Install App

ತಿರುಪತಿ ದೇವಸ್ಥಾನ ಮಂಡಳಿಯಲ್ಲಿ ಇನ್ನು ಹಿಂದೂಗಳಿಗೆ ಮಾತ್ರ ಅವಕಾಶ

Krishnaveni K
ಶುಕ್ರವಾರ, 1 ನವೆಂಬರ್ 2024 (12:41 IST)
ತಿರುಪತಿ: ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯಲ್ಲಿ ಇನ್ನು ಮುಂದೆ ಕೇವಲ ಹಿಂದೂಗಳಿಗೆ ಮಾತ್ರ ಅವಕಾಶ ಎಂದು ಟಿಟಿಡಿಗೆ ಹೊಸದಾಗಿ ಆಯ್ಕೆಯಾದ ಮುಖ್ಯಸ್ಥ ಬಿಆರ್ ನಾಯ್ಡು ಕಟ್ಟುನಿಟ್ಟಾಗಿ ಹೇಳಿದ್ದಾರೆ.

ಈ ಹಿಂದೆ ಜಗನ್ ಸರ್ಕಾರದ ಅವಧಿಯಲ್ಲಿ ಅನ್ಯಮತೀಯರೂ ಟಿಟಿಡಿಯ ಮುಖ್ಯ ಹುದ್ದೆಗಳಲ್ಲಿದ್ದರು. ಈ ನಡುವೆ ತಿರುಪತಿಯಲ್ಲಿ ಮತಾಂತರ, ಪ್ರಸಾದದಲ್ಲಿ ಕಲಬೆರಕೆ ಆರೋಪಗಳು ಕೇಳಿಬಂದಿದ್ದವು. ಇದೀಗ ನೂತನವಾಗಿ ಜಾರಿಗೆ ಬಂದಿರುವ ಚಂದ್ರಬಾಬು ನಾಯ್ಡು ಸರ್ಕಾರ ತಿರುಪತಿ ಆಡಳಿತ ಮಂಡಳಿಯಲ್ಲಿ ಭಾರೀ ಬದಲಾವಣೆ ತಂದಿದೆ.

ತಾವು ಅಧಿಕಾರಕ್ಕೆ ಬಂದ ಬೆನ್ನಲ್ಲೇ ಸಿಎಂ ಚಂದ್ರಬಾಬು ನಾಯ್ಡು ತಿರುಪತಿಯಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ಅವಕಾಶ ಎಂದಿದ್ದರು. ಅದರಂತೆ ಈಗ ಟಿಟಿಡಿಯಲ್ಲಿ ಸಾಕಷ್ಟುಬದಲಾವಣೆ ತರುತ್ತಿದ್ದಾರೆ. ಇದೀಗ ಹೊಸ ಮುಖ್ಯಸ್ಥರನ್ನು ನೇಮಕ ಮಾಡಲಾಗಿದ್ದು, ಬಿಆರ್ ನಾಯ್ಡು ಕೂಡಾ ಇನ್ನು ಮುಂದೆ ಟಿಟಿಡಿಯಲ್ಲಿ ಅನ್ಯಮತೀಯರಿಗೆ ಅವಕಾಶವಿಲ್ಲ ಎಂದಿದ್ದಾರೆ.

ತಿರುಪತಿ ದೇವಸ್ಥಾನಕ್ಕಾಗಿ ಕೆಲಸ ಮಾಡುವವರೆಲ್ಲರೂ ಹಿಂದೂಗಳೇ ಆಗಿರಬೇಕು. ಇದು ನನ್ನ ಮೊದಲ ಆದ್ಯತೆಯಾಗಿರಲಿದೆ. ಇಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅವೆಲ್ಲವನ್ನೂ ಒಂದೊಂದಾಗಿ ಬಗೆಹರಿಸಲಾಗುವುದು’ ಎಂದು ಬಿಆರ್ ನಾಯ್ಡು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments