Webdunia - Bharat's app for daily news and videos

Install App

ನಿರ್ಭಯಾ ಅತ್ಯಾಚಾರ ಆರೋಪಿಗಳ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ಗೃಹಸಚಿವಾಲಯ

Webdunia
ಶುಕ್ರವಾರ, 6 ಡಿಸೆಂಬರ್ 2019 (16:02 IST)
ನವದೆಹಲಿ: ಹೈದರಾಬಾದ್ ನಲ್ಲಿ ಪಶುವೈದ್ಯೆಯ ಮೇಲೆ ಅತ್ಯಾಚಾರ ಮಾಡಿದ ನಾಲ್ವರು ಆರೋಪಿಗಳು ಎನ್ ಕೌಂಟರ್ ಆದ ಬೆನ್ನಲ್ಲೇ 2012 ರಲ್ಲಿ ದೆಹಲಿಯಲ್ಲಿ ನಡೆದಿದ್ದ ಅಂತಹದ್ದೇ ಪೈಶಾಚಿಕ ಕೃತ್ಯವೆಸಗಿದವರ ಗಲ್ಲು ಶಿಕ್ಷೆ ಖಾಯಂಗೊಳಿಸಲು ಕೇಂದ್ರ ಗೃಹಸಚಿವಾಲಯ ಶಿಫಾರಸ್ಸು ಮಾಡಿದೆ.


2012 ರ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳಿಗೆ ವಿಧಿಸಿದ್ದ ಗಲ್ಲು ಶಿಕ್ಷೆಯ ವಿರುದ್ಧವಾಗಿ ಕ್ಷಮಾದಾನ ನೀಡುವಂತೆ ಆರೋಪಿಗಳು ಮನವಿ ಮಾಡಿದ್ದರು. ಆದರೆ ಕ್ಷಮಾದಾನ ನೀಡದಂತೆ ಈ ಮೊದಲು ದೆಹಲಿ ಸರ್ಕಾರ ರಾಷ್ಟ್ರಪತಿಗಳಿಗೆ ಮನವಿ ಮಾಡಿತ್ತು.

ಇದೀಗ ಕೇಂದ್ರ ಗೃಹ ಸಚಿವಾಲಯವೂ ನಿರ್ಭಯಾ ರೇಪಿಸ್ಟ್ ಗಳ ಕ್ಷಮಾದಾನ ಅರ್ಜಿ ತಿರಸ್ಕರಿಸಿ ಗಲ್ಲು ಶಿಕ್ಷೆ ಖಾಯಂಗೊಳಿಸಲು ಶಿಫಾರಸ್ಸು ಮಾಡಿದೆ. ಇದರಿಂದಾಗಿ ರಾಷ್ಟ್ರಪತಿಗಳು ಕ್ಷಮಾದಾನ ನೀಡುವ ಸಂಭವ ಕ್ಷೀಣವಾಗಿದೆ. ಅದೂ ಅಲ್ಲದೆ, ಇಂತಹ ಆರೋಪಿಗಳಿಗೆ ವಿನಾಯ್ತಿ ನೀಡಬಾರದು ಎಂದು ಸ್ವತಃ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರೇ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ನಿರ್ಭಯಾ ಆರೋಪಿಗಳಿಗೆ ಗಲ್ಲು ಖಾಯಂ ಆದಂತಾಗಿದೆ. ಎಲ್ಲವೂ ಸರಿ ಹೋದರೆ ಈ ತಿಂಗಳೇ ಕಾಮುಕರಿಗೆ ಗಲ್ಲು ಶಿಕ್ಷೆ ಜಾರಿಯಾಗುವ ಸಾಧ್ಯತೆಯಿದೆ. ಇವೆರಡೂ ಘಟನೆಗಳೂ ಅತ್ಯಾಚಾರಿಗಳಿಗೆ ತಕ್ಕ ಪಾಠವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಣೆಗೆ ಕುಂಕುಮ, ನಾಮ: ಎನ್ ಡಿಎ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ನಿಜಕ್ಕೂ ಯಾರು

Karnataka Rains: ರಾಜ್ಯಾದ್ಯಂತ ಈ ದಿನದವರೆಗೂ ಇರಲಿದೆ ಭಾರೀ ಮಳೆ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

ಮುಂದಿನ ಸುದ್ದಿ
Show comments