ಶತ್ರು ರಾಷ್ಟ್ರಗಳ ಖಂಡಾಂತರ ಕ್ಷಿಪಣಿಗಳನ್ನು ಪತ್ತೆ ಹಚ್ಚಿ ಧ್ವಂಸ ಮಾಡಬಲ್ಲ ಸಾಮರ್ಥ್ಯದ ದೇಸಿ ನಿರ್ಮಿತ ಸೂಪರ್ ಸಾನಿಕ್ ಕ್ಷಿಪಣಿ ಪರೀಕ್ಷೆಯನ್ನು ಭಾರತ ಇಂದು ಯಶಸ್ವಿಯಾಗಿ ಮಾಡಲಾಗಿದೆ ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ.
ಈ ರೀತಿಯ ಕ್ಷಿಪಣಿ ಪರೀಕ್ಷೆ ನಡೆಸುತ್ತಿರುವುದು ಎರಡನೇ ಸಲ ಎಂದು ತಿಳಿಸಿರುವ ರಕ್ಷಣಾ ಇಲಾಖೆ, ಶತ್ರು ರಾಷ್ಟ್ರಗಳ ಖಂಡಾಂತರ ಕ್ಷಿಪಣಿಗಳನ್ನು ಪತ್ತೆ ಮಾಡಿ ಇದ್ದಲ್ಲಿಂದಲೇ ಅವುಗಳನ್ನು ಧ್ವಂಸ ಮಾಡುವ ಸಾಮರ್ಥ್ಯ ಈ ಸೂಪರ್ ಸಾನಿಕ್ ಕ್ಷಿಪಣಿಗಿದೆ.
ದೇಸಿ ತಂತ್ರಜ್ಞಾನ ಬಳಸಿಕೊಂಡು ಈ ಕ್ಷಿಪಣಿಯನ್ನು ಅಭಿವೃದ್ಧಿಪಡಿಸಲಾಗಿದೆ. ಇಂದು ಬೆಳಗ್ಗೆ 10.10ಕ್ಕೆ ಸರಿಯಾಗಿ ಇಲ್ಲಿನ ಚಂಡೀಪುರದಲ್ಲಿರುವ ಸಂಯುಕ್ತ ಪರೀಕ್ಷಾ ವ್ಯಾಪ್ತಿಯಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಅಬ್ದುಲ್ ಕಲಾಂ ದ್ವೀಪದಿಂದ ಕ್ಷಿಪಣಿ ಗಗನಕ್ಕೆ ಚಿಮ್ಮುತ್ತಿದ್ದಂತೆ ಅಲ್ಲಿ ನೆರೆದಿದ್ದ ಭಾರತೀಯ ವಿಜ್ಞಾನಿಗಳು ಸಂತಸದಿಂದ ಕುಣಿದಿದಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.